ಕೋಝಿಕ್ಕೋಡ್(ವಿಶ್ವಕನ್ನಡಿಗ ನ್ಯೂಸ್): ಪ್ಯಾಲಸ್ತೀನಲ್ಲಿ ಇಸ್ರೇಲ್ ನಡೆಸುತ್ತಿರುವ ಕ್ರೂರ ಬಾಂಬ್ ಸ್ಫೋಟ ಮತ್ತು ಹಿಂಸಾಚಾರವನ್ನು ಕೊನೆಗೊಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಪ್ಯಾಲಸ್ತೀನಿಯರ ಮೇಲೆ ಇಸ್ರೇಲ್ ನಡೆಸಿದ ಕ್ರೂರ ಮತ್ತು ಕೆಟ್ಟ ದಾಳಿ ಜಗತ್ತನ್ನು ಬೆಚ್ಚಿಬೀಳಿಸುತ್ತದೆ. ಪ್ಯಾಲಸ್ತೀಯನ್ ಭೂಮಿಯನ್ನು ಅನ್ಯಾಯವಾಗಿ ಆಕ್ರಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ಪ್ಯಾಲಸ್ತೀನ್ ಅನ್ನು ಬೆಂಬಲಿಸುವ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯಂತಹ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಬಲವಾದ ಬೆಂಬಲವನ್ನು ನೀಡಿ ಪ್ಯಾಲಸ್ತೀನನ್ನು ಸಂರಕ್ಷಿಸಲು ಕೈಜೋಡಿಸಬೇಕಾಗಿದೆ.
ವಿಶ್ವಶಕ್ತಿಯಾಗಿ ಭಾರತದ ಮಧ್ಯಸ್ಥಿಕೆಗಳು ಈ ವಿಷಯದ ಬಗ್ಗೆ ಸಕಾರಾತ್ಮಕ ನಿಲುವು ತೆಗೆದುಕೊಳ್ಳಲು ವಿವಿಧ ರಾಷ್ಟ್ರಗಳಿಗೆ ಪ್ರೇರಣೆ ನೀಡುತ್ತದೆ.
ನಮ್ಮ ಮಾನವೀಯತೆ ಮತ್ತು ನ್ಯಾಯದ ಪರವಾಗಿ ದೃಢವಾಗಿ ನಿಲ್ಲಬೇಕು, ಇಸ್ರೇಲಿ ದೌರ್ಜನ್ಯವನ್ನು ಖಂಡಿಸಬೇಕು ಮತ್ತು ಅದನ್ನು ಕೊನೆಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಕಾಂತಪುರಂ ಎಪಿ ಉಸ್ತಾದರು ಕೋರಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.