(www.vknews.com) : ಕರಾವಳಿಯಾದ್ಯಂತ ನಿನ್ನೆಯಿಂದ ತೌಕ್ತೇ ಚಂಡಮಾರುತ ಪರಿಣಾಮ ಭಾರೀ ಮಳೆ ಗಾಳಿಯಾಗುತ್ತಿದ್ದು ಜಿಲ್ಲಾಡಳಿತ ತಕ್ಷಣ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾಕೃತಿಕ ವಿಕೋಪ ತಡೆ,ರಕ್ಷಣೆ ಹಾಗೂ ಪರಿಹಾರಗಳಿಗಾಗಿ ಜನಪ್ರತಿನಿಧಿಗಳು,ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕೆಂದು ಶಾಸಕ ಯು.ಟಿ.ಖಾದರ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದರಬೇಕು,ಆಯಾ ಪ್ರದೇಶದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸಾರ್ವಜನಿಕರಿಗೆ ನೆರವಾಗಬೇಕೆಂದು ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.