ಮಡಿಕೇರಿ (www.vknews.com) : ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕೊಡಗು ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚಿಕಿತ್ಸೆಗೆ ಅತ್ಯಗತ್ಯ ಸೌಲಭ್ಯಗಳನ್ನು ವಿಸ್ತರಿಸಲು ವಿಶೇಷ ಗಮನ ಹರಿಸಬೇಕಾಗಿ ಜಿಲ್ಲಾಡಳಿತಕ್ಕೆ SKSSF ಜಿಸಿಸಿ ಕೊಡಗು ಮನವಿ ಮಾಡಿದ್ದಾರೆ.
ಕೋವಿಡ್ ಪೀಡಿತರ ಚಿಕಿತ್ಸೆಗೆ ಬೇಕಾದ ಅಗತ್ಯವಾದ ಸೌಲಭ್ಯಗಳು ಆಸ್ಪತ್ರೆಗಳಲ್ಲಿ ಲಭಿಸುತ್ತಿಲ್ಲ. ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್ ಗಳ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾಸ್ಪತ್ರೆಯಲ್ಲಿನ ಸೌಲಭ್ಯಗಳ ಕೊರತೆಯಿಂದ ಜಿಲ್ಲೆಯ ಜನತೆ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಮೈಸೂರು, ಮಂಗಳೂರು ಅಥವಾ ಇನ್ನಿತರ ಜಿಲ್ಲೆಗಳನ್ನೇ ಆಶ್ರಯಿಸುವಂತಾಗಿದೆ. ಆದ್ದರಿಂದ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಸ್ಥಾಪಿಸುವಂತೆ ಆಗ್ರಹಿಸಿದೆ.
ಅದರಂತೆಯೇ ಲಾಕ್ಡೌನ್ ಸಮಯದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು SKSSF ಅಧೀನ ಸಮಿತಿಯಾದ ವಿಖಾಯ ಸನ್ನದ್ಧ ಸೇವಕರಿಗೆ ವಿಶೇಷ ಪಾಸ್ ನೀಡಬೇಕೆಂದು SKSSF ಜಿಸಿಸಿ ಕೊಡಗು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.