ಕೋಲಾರ : ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ತಿಳಿಸಿದರು. 2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.