ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ತಾಲೂಕಿನ ಎಡಮೊಗೆ ಹೊಸಬಾಳು ಎಂಬಲ್ಲಿ ದ್ವೇಷದಿಂದ ಸ್ಥಳೀಯನೊಬ್ಬನ ಮೇಲೆ ಕಾರು ಹಾಯಿಸಿ ಹತ್ಯೆ ಮಾಡಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ನನ್ನು ಶಂಕರನಾರಾಯಣ ಪೊಲೀಸರು ಶನಿವಾರ ತಡ ರಾತ್ರಿ ಬಂಧಿಸಿದ್ದಾರೆ.ಶನಿವಾರ ಸ್ಥಳೀಯ ನಿವಾಸಿ ಉದಯ್ ಗಾಣಿಗ ಎಂಬವರ ಮೇಲೆ ಅವರ ಮನೆ ಎದುರಿನ ರಸ್ತೆಯಲ್ಲಿ ನಿಂತ್ತಿದ್ದ ಸಂದರ್ಭ ಅವರ ಮೇಲೆ ಕಾರು ಹಾರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು ಎಂದು ಸ್ಥಳೀಯರ ಮತ್ತು ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಶಂಕರನಾರಾಯಣ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ,ಕಾರು ಬಿಟ್ಟು ಪರಾರಿ ಯಾದ ಆರೋಪಿ ಪ್ರಾಣೇಶ್ ಯಡಿಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು ತನಿಖೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆಗೈಯ್ಯಲಾಗಿದೆ ಎಂಬಿತ್ಯಾದಿ ಅಂಶಗಳು ಪೊಲೀಸ್ ತನಿಖೆ ಇಂದಷ್ಟೇ ಬೆಳಕಿಗೆ ಬರಬೇಕಿದೆ.ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಕುಮಾರ ಚಂದ್ರ, ಡಿವೈಎಸ್ ಪಿ ಶ್ರೀಕಾಂತ್, ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಶಂಕರನಾರಾಯಣ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಙರು ಘಟನಾ ಸ್ಥಳಕ್ಕೆ ಆಗಮಿಸಿ ಕೆಲ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.ಮಾಜಿ ಶಾಸಕ ಗೋಪಾಲ್ ಪೂಜಾರಿ ಸುದ್ದಿ ಗೋಷ್ಠಿ :ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಬೈಂದೂರು ಶಾಸಕ ಕೆ ಗೋಪಾಲ ಪೂಜಾರಿ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ಪ್ರಶ್ನಿಸಿದ್ದಕ್ಕೆ ಸ್ಥಳೀಯನನ್ನು ಕೊಂದೇ ಬಿಟ್ಟನಾ ಪಂಚಾಯತ್ತ್ ಅಧ್ಯಕ್ಷ ?!
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.