ಶ್ರೀನಿವಾಸಪುರ (www.vknews.com):- ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಸೌಲಭ್ಯ ನೀಡಲಾಗುವುದು ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಬಿ.ವಿ.ಶಿವಾರೆಡ್ಡಿ ಹೇಳಿದರು .
ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ೧೦ ಆಮ್ಲಜನಕ ಸಿಲಿಂಡರ್ಗಳನ್ನು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಷರೀಫ್ ಅವರಿಗೆ ಹಸ್ತಾಂತರಿಸಿ ಮಾತನಾಡಿ ಗಡಿ ಗ್ರಾಮದ ಆಸತ್ರೆಗೆ ಬರುವ ಕೋವಿಚ್ ಪೀಡಿತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಸೌಲಭ್ಯ ಕಲ್ಪಿಸಲಾಗಿದೆ ಗಡಿ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯ ಬಡವರಿದ್ದಾರೆ ಅವರು ದೂರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಶಕ್ತರಾಗಿಲ್ಲ . ಅಂಥ ವ್ಯಕ್ತಿಗಳ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು. ಈಗ ೩೦ ಹಾಸಿಗೆಗೆ ಸಾಕಾಗುವಷ್ಟು ಆಮ್ಲಜನಕ ಒದಗಿಸಲಾಗಿದೆ . ಈ ಆಸ್ಪತ್ರೆಯಲ್ಲಿ ಪ್ರಾರಂಭಕ್ಕೆ ಕೋವಿಡ್ ಪೀಡಿತರ ಚಿಕಿತ್ಸೆಗಾಗಿ ೮ ಹಾಸಿಗಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ . ಇಲ್ಲಿ ಎಷ್ಟೇ ಹಾಸಿಗೆ ಸೌಲಭ್ಯ ಒದಗಿಸಿದರೂ , ಅಗ್ಯವಾದ ಆಮ್ಲಜನಕದ ಸಿಲಿಂಡರ್ಗಳನ್ನು ನೀಡಲಾಗುವುದು . ಇಷ್ಟು ಮಾತ್ರವಲ್ಲದೆ ಹೋಂ ಕ್ವಾರಂಟೈನ್ನಲ್ಲಿರುವ ಬಡ ಕೋವಿಡ್ ರೋಗಿಗಳಿಗೆ ಅಗತ್ಯವಾದ ಔಷಧಗಳನ್ನು ಪೂರೈಸಲಾಗುವುದು . ಸೋಂಕಿತರು ಹಾಗೂ ಆಸತ್ರೆಗೆ ಯಾವುದೇ ಸೌಲಭ್ಯ ಬೇಕಿದ್ದರೂ ಕೇಳಿ ಪಡೆಯಬಹುದಾಗಿದೆ ಎಂದು ಹೇಳಿದರು.
ಗೌನಿಪಲ್ಲಿ ಆಸ್ಪತ್ರೆ ವೈದ್ಯಾಧಿಕಾರಿ ಡಾ ಷರೀಫ್ , ಮುಖಂಡರಾದ ಬಕುಸಾಬ್ , ಶೇಷಾದಿ , ರಾಮ್ ಮೋಹನ್ , ಅನಿಲ್ , ಏ.ಕೆ.ನಾಗರಾಜ್ , ಅಬ್ಬು , ರೆಡ್ಡಪ್ಪ , ಪ್ರಶಾಂತ್ , ಮಹೇಶ್ , ಕಾರ್ತಿಕ್ ರೆಡ್ಡಿ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.