ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ – ಬಿಜೆಪಿ ಸೇರ್ಪಡೆ ಬಳಿಕ ಜಿತಿನ್ ಪ್ರಸಾದ್
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಬಿಜೆಪಿ ಮುಖ್ಯ ವಕ್ತಾರ ಅನಿಲ್ ಬಲುನಿ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾದರು.
ಬಳಿಕ ಮಾತನಾಡಿದ ಜಿತಿನ್ ಪ್ರಸಾದ್, ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ, ಉಳಿದ ಪಕ್ಷಗಳೆಲ್ಲಾ ಕೆಲವು ಜನರಿಗೆ ಅಥವಾ ಪ್ರದೇಶಕ್ಕೆ ಸೀಮಿತವಾಗಿದೆ. ಇಷ್ಟು ವರ್ಷಗಳ ಕಾಲ ನನಗೆ ರಾಜಕೀಯದಲ್ಲಿ ಕೆಲಸ ಮಾಡಿ, ನಾಯಕನಾಗಿ ಬೆಳೆಯಲು ಸಹಕರಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು, ಇನ್ನು ಮುಂದೆ ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ದುಡಿಯುತ್ತೇನೆ, ಜನರಿಗೆ ಸಹಾಯ ಮಾಡಬೇಕೆಂದರೆ, ಕೆಲಸ ಮಾಡಬೇಕೆಂದರೆ ಬಿಜೆಪಿಯೇ ಸರಿಯಾದ ಪಕ್ಷ ಎಂದು ನನಗೆ ಮನವರಿಕೆಯಾಗಿದೆ, ಹೀಗಾಗಿ ಬಿಜೆಪಿ ಸೇರಿದ್ದೇನೆ ಎಂದರು.
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಿತಿನ್ ಪ್ರಸಾದ ಸೇರ್ಪಡೆ ಬಿಜೆಪಿಗೆ ಬಲ ಬಂದಂತಾಗಿದ್ದು, ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.