ಶಿವಮೊಗ್ಗ ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರಿಂದ ಆಹಾರ ಕಿಟ್ ವಿತರಣೆ.
(ವಿಶ್ವ ಕನ್ನಡಿಗ ನ್ಯೂಸ್) ಶಿವಮೊಗ್ಗ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ,ಶಿವಮೊಗ್ಗ ಜಿಲ್ಲಾ ಸಂಸ್ಥೆಗೆ 1.50 ಕೋಟಿ ಅನುದಾನ ಬಿಡುಗಡೆ ಮಾಡಿ ಕೊಡಿಸುತ್ತೇನೆಂದು ಲೋಕಸಭಾ ಸದಸ್ಯ ಶ್ರೀ ಬಿ.ವೈ.ರಾಘವೇಂದ್ರ ಅವರು ಭರವಸೆ ನೀಡಿದರು.
ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ದಿನಪತ್ರಿಕೆ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರುಗಳಿಗೆ ಹಾಗೂ ಪತ್ರಿಕೆ ಹಂಚುವ ಹುಡುಗರಿಗೆ ಆಹಾರ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಸಾಮಗ್ರಿ ಪೊಟ್ಟಣವನ್ನು ವಿತರಿಸಿ ಅವರು ಮಾತನಾಡಿದರು.
ಕೋವಿದ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಸರ್ಕಾರವು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುತ್ತಿರುವ ದೇಶ ಎಂದರೆ ಭಾರತ, ತಜ್ಞರು 3 ನೇ ಅಲೆ ಬರುವ ಸೂಚನೆಯನ್ನು ನೀಡಿದ್ದರಿಂದ ಕೋವಿಡ್ಗೆ ಹೆದರದೆ ತಾವೆಲ್ಲರೂ ಲಸಿಕೆಯನ್ನು ಪಡೆದುಕೊಂಡು ತಮ್ಮ ತಮ್ಮ ಆರೋಗ್ಯವನ್ನು ನೋಡಿಕೊಳ್ಳಿ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಸಂಸ್ಥೆಗೆ ಈ ಹಿಂದೆ 2 ಕೋಟಿ ಅನುದಾನ ಮಂಜೂರಾಗಿದ್ದು ಅದರಲ್ಲಿ ಕೇವಲ 50 ಲಕ್ಷ ರೂಪಾಯಿ ಮಾತ್ರ ಬಿಡುಗಡೆ ಆಗಿದೆ ಎಂದು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ.ರಮೇಶಶಾಸ್ತ್ರಿ ತಿಳಿಸಿದ್ದರಿಂದ ಸೈಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಲು ಇನ್ನುಳಿದ 1.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಕೊಡಿಸುವುದಾಗಿ ತಿಳಿಸಿದರು. ತಕ್ಷಣ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರನ್ನು ಭೇಟಿ ಮಾಡಿ ಬಾಕಿ ಉಳಿದ ಅನುದಾನವನ್ನು ಬಿಡುಗಡೆ ಮಾಡಿ ಕೊಡಿಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಮಾನ್ಯ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು ಮಾತನಾಡಿ ಅಯುಷ್ಮಾನ್ ಭಾಭಾರತ ಯೋಜನೆಯಡಿಯಲ್ಲಿ ಕೋರೊನಾ ಪಾಸಿಟಿವ್ ಆದವರಿಗೆ ಪೂರ್ಣ ವೆಚ್ಚವನ್ನು ನೋಡಿಕೊಳ್ಳುತ್ತಾ ಇದೆ ಆದರೆ ತುಂಬಾ ಜನ ಇದರ ಪ್ರಯೋಜನವನ್ನು ಪಡೆದುಕೊಳ್ಳದೆ ಖಾಸಗಿ ಆಸ್ಪತ್ರೆಯ ಮೊರೆ ಹೋಗಿದ್ದಾರೆ, ಸರ್ಕಾರವು ಜನಹಿತಕ್ಕಾಗಿ ಅನೇಕ ಸವಲತ್ತುಗಳನ್ನು ಮಾಡಿದೆ. ಅದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ.ರಮೇಶಶಾಸ್ತ್ರಿ ರವರು ಮಾತನಾಡಿ ಮಾನ್ಯ ಲೋಕಸಭಾ ಸದಸ್ಯರು ಅನುದಾನ ಮಕ್ಕಳ ಚಟುವಟಿಕೆಗಳನ್ನು ನಡೆಸಲು ಹಣದ ಅವಶ್ಯಕತೆ ಇದ್ದು ಮಂಜೂರಾದ ಅನುದಾನವನ್ನು ಬಿಡುಗಡೆ ಮಾಡಿ ಕೊಡಿಸುವುದಾಗಿ ತಿಳಿಸಿದ್ದರಿಂದ ಅವರಿಗೆ ನಮ್ಮ ಜಿಲ್ಲಾ ಸಂಸ್ಥೆಯ ಪರವಾಗಿ ತುಂಬು ಹೃದಯದ ಧನ್ಯವಾದವನ್ನು ತಿಳಿಸುತ್ತೇವೆ. ಅಲ್ಲದೆ ಮುಂದೆಯು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಇನ್ನು ಹೆಚ್ಚಿನ ಶಕ್ತಿ ಒದಗಿಸಿಕೊಟ್ಟಂತಾಗುತ್ತದೆ ಅಲ್ಲದೆ ಶ್ರೀ ಬಿ.ವೈ.ರಾಘವೇಂದ್ರ ರವರ ತಾಯಿಯವರು ಶಿಕಾರಿಪುರದಲ್ಲಿ ನಮ್ಮ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ ಹಾಗೆ ಅವರ ಸಹೋದರಿ ಶ್ರೀಮತಿ ಎಸ್.ವೈ.ಅರುಣಾದೇವಿ ರವರು ನಮ್ಮ ಜಿಲ್ಲೆಯ ಜಿಲ್ಲಾ ಗೈಡ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ನೆನೆಸಿಕೊಂಡರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ರವರು ಉಪಸ್ಥಿತರಿದ್ದರು.
ಸಭೆಯಲ್ಲಿ ಸ್ವಾಗತವನ್ನು ಜಿಲ್ಲಾ ಕೋಶಾಧಿಕಾರಿ ಶ್ರೀ ಚೂಡಾಮಣಿ ಇ ಪವಾರ ನಡೆಸಿಕೊಟ್ಟರು. ಧನ್ಯವಾದವನ್ನು ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಕುಂತಲ ಚಂದ್ರಶೇಖರ ನೇರವೆರಿಸಿದರು.ಕಾರ್ಯಕ್ರಮದ ನಿರೂಪಣೆಯನ್ನು ಎ.ಎಸ್.ಒ.ಸಿ. ಶ್ರೀಮತಿ ಭಾರತಿ ಡಾಯಸ ರವರು ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಯವರಾದ ಶ್ರೀ ಹೆಚ್.ಪರಮೇಶ, ಡಿಟಿಸಿ ಶ್ರೀಮತಿ ಸಿ.ಎಸ್.ಕಾತ್ಯಾಯಿನಿ, ಪಿ.ಆರ್.ಒ ಶ್ರೀ ವಿಜಯಕುಮಾರ, ಎಸ್.ಜಿ.ವಿ. ಕುಮಾರಿ ಸುಮಲತಾ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಡಿ.ಎನ್.ನೂರ ಅಹಮದ್, ಸಹ ಕಾರ್ಯದರ್ಶಿ ಶ್ರೀ ರಾಜೇಶ ಅವಲಕ್ಕಿ, ಸೈಟರ್ ಕೃಷ್ಣಸ್ವಾಮಿ, ಶ್ರೀಮತಿ ಸಹನಾ ಚೇತನ್, ಮಲ್ನಾಡ್ ಗುಂಪಿನ ರೋವರ್ ರೇಂಜರ್ಗಳು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.