ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಪುತ್ತೂರು ತಾಲೂಕಿನ ಸುಳ್ಯಪದವು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆಗೈಯ್ಯತ್ತಿದ್ದ ಪ್ರಿಯಾ ಎಂಬವರು ವೇತನವಿಲ್ಲದೆ ನೊಂದು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದ್ದು ದುರದೃಷ್ಟಕರ, ಈ ಸಾವಿಗೆ ರಾಜ್ಯ ಸರಕಾರವೇ ನೇರ ಹೊಣೆಯೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಆರೋಪಿಸುತ್ತಿದೆ.
ಪ್ರಸ್ತುತ ಲಾಕ್ಡೌನ್ ಸಂದರ್ಭದಲ್ಲಿ ಅತಿಥಿ ಶಿಕ್ಷಕರಾಗಿ, ಅರೆಕಾಲಿಕ ಗುತ್ತಿಗೆ ಆಧಾರದಲ್ಲಿ ಶಿಕ್ಷಕರಾಗಿ ನೇಮಕಗೊಂಡಿರುವ ಹಲವಾರು ಶಿಕ್ಷಕರ ಬದುಕು ಇಂದು ಬೀದಿಗೆ ಬಿದ್ದಿದೆ. ಬರುತ್ತಿದ್ದ ಅಲ್ಪ ಆದಾಯದ ಮೂಲ ಸ್ಥಗಿತಗೊಂಡಿರುವ ಕಾರಣಕ್ಕೆ ಸ್ವಾಭಿಮಾನಿಯಾಗಿ ಜೀವನ ಸಾಗಿಸುತ್ತಿದ್ದ ಶಿಕ್ಷಕರಿಗೆ ಬಹಳಷ್ಟು ತೊಂದರೆಯುಂಟಾಗಿದೆ. ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಸ್ಪಂದಿಸದೆ ಇಂತಹ ದುರ್ಘಟನೆಗಳಿಗೆ ಕಾರಣವಾಗಿದೆ.
ಸರ್ಕಾರ ಈ ಬಗ್ಗೆ ಈ ಕೂಡಲೇ ಎಚ್ಚೆತ್ತುಕೊಂಡು ಎಲ್ಲಾ ಶಿಕ್ಷಕರಿಗೆ ಗೌರವಧನ ಬಿಡುಗಡೆಗೊಳಿಸಬೇಕು ಹಾಗೂ ಮೃತ ಶಿಕ್ಷಕಿಯ ಕುಟುಂಬಕ್ಕೆ ತಕ್ಷಣ ಪರಿಹಾರ ಘೋಷಣೆಯಾಗಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷ ಅನ್ಸಾರ್ ಬೆಳ್ಳಾರೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.