(ವಿಶ್ವಕನ್ನಡಿಗ ನ್ಯೂಸ್) ಶಿವಮೊಗ್ಗ: ಆಸ್ಪತ್ರೆಗಳಿಗೆ ಜಿಯೋ ಫೆನ್ಸಿಂಗ್, ವೈದ್ಯರು, ಸಿಬ್ಬಂದಿಗಳ ಕಳ್ಳಾಟಕ್ಕೆ ಬೀಳುತ್ತೆ ಬ್ರೇಕ್.
ಬಯೋಮೆಟ್ರಿಕ್ನಲ್ಲಿ ಹಾಜರಾತಿ ಹಾಕಿ, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗೆ ಹೋಗುತ್ತಾರೆ ಎಂಬ ಆರೋಪವಿತ್ತು. ಇದಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಿಯೋ ಫೆನ್ಸಿಂಗ್ ಅಳವಡಿಸಲು ನಿರ್ಧರಿಸಿದೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಜಿಯೋ ಫೆನ್ಸಿಂಗ್ ಅಳವಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.
ಬಯೋಮೆಟ್ರಿಕ್ ಹಾಕಿ ವೈದ್ಯರು, ಸಿಬ್ಬಂದಿಗಳು ಹೊರಗೆ ಹೋಗುತ್ತಾರೆ ಎಂಬ ಆರೋಪವಿದೆ. ಜಿಯೋ ಫೆನ್ಸಿಂಗ್ ಅಳವಡಿಸಿದರೆ ನೂರು ಮೀಟರ್ ಅಥವಾ ಐವತ್ತು ಮೀಟರ್ ವ್ಯಾಪ್ತಿಯಲ್ಲಿ ವೈದ್ಯರು, ಸಿಬ್ಬಂದಿಗಳು ಎಷ್ಟು ಭಾರಿ ಹೊರಗೆ ಹೋಗಿದ್ದಾರೆ ಅನ್ನುವುದು ಗೊತ್ತಾಗಲಿದೆ. ಅವರ ಹಾಜರಾತಿಯೊಂದಿಗೆ ಅದನ್ನು ಹೋಲಿಕೆ ಮಾಡಿ ನೋಡಲಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.