ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಜನರ ಕುಟುಂಬ ಸದಸ್ಯರಿಗೆ ಹಾಗೂ ಕಾಲುಬಾಯಿ ಇನ್ನಿತರೆ ಕಾರಣಗಳಿಂದ ದನಕರುಗಳನ್ನು ಕಳೆದುಕೊಂಡ ರೈತರಿಗೆ ಆರ್ಥಿಕ ನೆರವು ನೀಡುವುದಾಗಿ ಎಬಿಡಿ ಗ್ರೂಪಿನ ಅಧ್ಯಕ್ಷ ರಾಜೀವ್ಗೌಡ ತಿಳಿಸಿದರು.
ಜಿಲ್ಲೆಯಲ್ಲಿ ದಕ್ಷಿಣದ ಕಾಶಿ ಎಂದು ಖ್ಯಾತಿ ಹೊಂದಿರುವ ಕ್ಷೇತ್ರದ ಪವಿತ್ರ ಯಾತ್ರಾಸ್ಥಳ ತಲಕಾಯಲಬೆಟ್ಟದಲ್ಲಿ ದೇವಾಲಯದ ಅಭಿವೃದ್ಧಿಗಾಗಿ ವಾಗ್ದಾನ ಮಾಡಿದ್ದು ಅದನ್ನು ಕಾರ್ಯಗತಗೊಳಿಸಲು ಬದ್ದನಾಗಿದ್ದೇನೆ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಗೊಂಡ ಬಳಿಕ ದೇವಾಲಯದ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸುವುದಾಗಿ ತಿಳಿಸಿದ ಅವರು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃಧ್ಧಿಗೆ ಆದ್ಯತೆ ನೀಡಿದ್ದು ಅತಿ ಶೀಘ್ರದಲ್ಲಿ ತುರ್ತು ವಾಹನಗಳನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ ಮಾಡುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಬಿಡಿ ಗ್ರೂಪಿನ ಮಾಧ್ಯಮ ಸಲಹೆಗಾರ ಶ್ರೀನಿವಾಸ್ಬಾಬು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.