ಬೆಳ್ಳಾರೆ ( www.vknews.com ): ಕೋವಿಡ್ ಸಂಕಷ್ಟದ ಸಮಯದಲ್ಲೂ ನಿರಂತರವಾಗಿ ತೈಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಸ್ ಡಿ ಪಿ ಐ ಬೆಳ್ಳಾರೆ ವಲಯ ಸಮಿತಿ ವತಿಯಿಂದ ಬೈಕನ್ನು ತಳ್ಳುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆಯವರು ಮೋದಿ ಸರಕಾರದ ದುರಾಡಳಿತದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಡಿಪಿಐ ವಲಯ ಅಧ್ಯಕ್ಷ ಸಿದ್ದೀಕ್ ಎಂ, ಕಾರ್ಯದರ್ಶಿ ಶಫೀಮ್, ಎಸ್ ಡಿಪಿಐ ರಾಜ್ಯ ಮುಖಂಡ ಶಾಫಿ ಬೆಳ್ಳಾರೆ, ವಲಯ ಸಮಿತಿ ಸದಸ್ಯರಾದ ಶಹೀದ್,ಸದ್ದಾಂ ಹುಸೇನ್,ಸಿದ್ದೀಕ್ ಟೌನ್ , ಗ್ರಾಮ ಪಂಚಾಯತ್ ಸದಸ್ಯೆ ನಸೀಮಾ ರ ಪತಿ ಹಾರಿಸ್ ಪಳ್ಳಿಮಜಲು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.