ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) ಕನ್ನಡದಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡಲು ಮುಂದಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ಧಾರವನ್ನು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ಸ್ವಾಗತಿಸಿದ್ದರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡರು ಮಾತನಾಡಿ ಎಂಜಿನಿಯರಿಂಗ್ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ನೀಡುತ್ತಿರುವುದು ಕನ್ನಡಿಗರೆಲ್ಲರೂ ಸಂತಸಪಡುವ ಸಂಗತಿಯಾಗಿದೆ. ವಿವಿಯ ಈ ನಿರ್ಧಾರ ಕನ್ನಡ ಅಸ್ಮಿತೆಯನ್ನು ಗಟ್ಟಿಗೋಳಿಸುವಂತಹದ್ದಾಗಿದೆ.
ರಾಷ್ಟಕವಿ ವಿಶ್ವಮಾನವ ಕುವೆಂಪುರವರ ಕನಸು ಸಹ ಈಗ ನನಸಾಗಿದೆ. ರಾಷ್ತ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳ ಪರವಾಗಿರುವ ಅಂಶಗಳನ್ನು ರಾಜ್ಯ ಸರ್ಕಾರ ತನ್ನ ಶಿಕ್ಷಣ ನೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ವರದಿ: ಲಕ್ಕೂರು ಎಂ ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.