ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): – ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜನ ಜೆಡಿಎಸ್ಗೆ ಅಧಿಕಾರ ನೀಡಿದರೆ ಕೋವಿಡ್ ಸಂಕಷ್ಟದಲ್ಲಿ ಜನರ ಜೀವ ರಕ್ಷಣೆಗೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು .
ನಗರ ಹೊರವಲಯದ ನಾರಾಯಣಿ ಕಲ್ಯಾಣಮಂಟಪದಲ್ಲಿ ಶುಕ್ರವಾರ ಆಶಾಕಾರ್ಯಕರ್ತೆಯರು , ೧೦೮ ಆಂಬ್ಯುಲೆನ್ಸ್ ಸಿಬ್ಬಂದಿ ಹಾಗೂ ವಿಕಲಚೇತನರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು . ಆಶಾ ಕಾರ್ಯಕರ್ತೆಯರು ಬೇಡಿಕೆಗಳನ್ನು ಈಡೇರಿಸುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದಿರಿ , ನಿಮ್ಮ ಬೇಡಿಕೆ ಈಡೇರಿಕೆಗೆ ನಾನು ೨೦೧೮ ಚಿಂತನೆ ಮಾಡಿದ್ದೆ ಆದರೆ ಆಗ ನನ್ನ ಮುಂದೆ ರೈತರ ಸಾಲ ಮನ್ನಾ ಮಾಡುವ ಬದ್ದತೆ , ಆಲೋಚನೆ ಇದ್ದುದರಿಂದ ಈ ಕಾರ್ಯ ಮಾಡಿದೆ ಆದರೆ ನಿಮ್ಮ ಬೇಡಿಕೆ ಈಡೇರಿಸಲು ಆಗಲಿಲ್ಲ . ಎಂದು ವಿಷಾದಿಸಿದರು . ಮುಂದಿನ ದಿನಗಳಲ್ಲಿ ಒಳ್ಳೆಯ ಸರ್ಕಾರವನ್ನು ರಾಜ್ಯದ ಜನ ಆಯ್ಕೆ ಮಾಡಿದರೆ ನೀವು ಬೀದಿಗೆ ಇಳಿದು ಹೋರಾಟ ಮಾಡುವುದಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ , ನಿಮ್ಮ ಸಮಸ್ಯೆಗೆ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದರು . ವಿಶ್ವದಲ್ಲಿ ಕೊರೊನ್ಹಾ ವ್ಯಾಪಿಸಿದೆ . ಜನರ ಬದುಕಿಗೆ ರಕ್ಷಣೆ ನೀಡುವ ಕೆಲಸವನ್ನು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದು ಅವರಿಗೆ ಗೌರವ ಕೊಡುವ ಕೆಲಸವನ್ನು ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು .
ಕೋವಿಕ್ ಸಂತ್ರಸ್ತರಿಗೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ೪ ಸಾವಿರ ಔಷಧಿ ಕಿಟ್ ಗಳನ್ನು ನೀಡಿರುವುದು ಶ್ಲಾಘನೀಯ ಎಂದ ಅವರು , ಸಂಕಷ್ಟದಲ್ಲಿ ಇರುವವರ ನೆರವಿಗೆ ಪಕ್ಷದ ಕಾರ್ಯಕರ್ತರು , ಮುಖಂಡರು ನಿಂತಿದ್ದಾರೆ ಎಂದರು . ೨ ನೇ ಅಲೆಯಲ್ಲಿ ಸರ್ಕಾರ ಎಡವಿದೆ ಕೋವಿಡ್ ಮೊದಲ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸಿದ ಸರ್ಕಾರ ೨ ನೇ ಅಲೆಯಲ್ಲಿ ಎಡವಿದೆ , ಇಂತಹ ಸಂದರ್ಭದಲ್ಲೂ ಕೊರೋನಾ ವಾರಿಯರ್ಸ್ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ , ಅವರಿಗೆ ಪ್ರತಿಯೊಬ್ಬರೂ ಋಣಿಯಾಗಿರಬೇಕು ಎಂದರು . ರಾಷ್ಟ್ರ , ವಿಶ್ವದಲ್ಲಿ ಕೋವಿಡ್ ೨ ನೇ ಅಲೆಯಿದ್ದು ಸಾವು ನೋವುಗಳು ಸಂಭವಿಸಿವೆ . ಇಂದಿನ ಈ ಪರಿಸ್ಥಿಯಲ್ಲಿ ಕೊರೋನಾ ವಾರಿಯರ್ಸ್ ಸೇವೆ ಶ್ಲಾಘನೀಯ . ಅನೇಕ ಜಾಗೃತಿ ಕೆಲಸಗಳನ್ನು ಆಶಾ ಕಾರ್ಯಕರ್ತೆಯರು ಮಾಡಿದ್ದೀರಿ , ಜನತೆಯಲ್ಲಿ ಜಾಗೃತಿ ಮೂಡಿಸಿದ್ದೀರಿ ಎಂದರು . ವಾರಿಯರ್ಗೆ ನೆರವಾಗುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು .
ಕೊರೊನಾದಿಂದ ಸಾವು – ನೋವು ಅನುಭವಿಸಿರುವ ಕುಟುಂಬಗಳಿಗೆ ಮತ್ತಷ್ಟು ಸೇವೆ ಸಲ್ಲಿಸಬೇಕೆಂದು ಮನವಿ ಮಾಡಿದರು . ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿಕೊವಿಡ್ನಲ್ಲಿ ಅನೇಕರನ್ನು ಕಳೆದುಕೊಂಡಿದ್ದೇವೆ , ಆಕ್ಸಿಜನ್ , ಬೆಡ್ ಸಮಸ್ಯೆ ಕಂಡಿದ್ದೇವೆ , ಸದ್ಯ ರೋಗ ತಹಬಂದಿಗೆ ಬಂದಿದ್ದು , ನಿಟ್ಟುಸಿರು ಬಿಡುವಂತಾಗಿದೆ ಎಂದರು . ಕೋವಿ ಲಾಕ್ ಡೌನ್ ಸಂದರ್ಭದಲ್ಲಿ ಅನೇಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ . ಕೂಲಿ ಕಾರ್ಮಿಕರು ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಅನೇಕ ಕಡೆಗಳಲ್ಲಿ ಜನರ ಕೈಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು . ಇದೇ ಸಂದರ್ಭದಲ್ಲಿ ದಾನಿಗಳು ನೀಡಿದ್ದ ಆಕ್ಸಿಜನ್ಸ್ ಸಾಂಧ್ರಕಗಳನ್ನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಹಸ್ತಾಂತರ ಮಾಡಲಾಯಿತು . ವಿಕಲಚೇತನರು , ಆಶಾ ಕಾರ್ಯಕರ್ತೆಯರು , ೧೦೮ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಲಾಯಿತು .
ವೇದಿಕೆಯಲ್ಲಿ ಶಾಸಕ ಕೆ.ಶ್ರೀನಿವಾಸಗೌಡ್ರವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು , ರಮೇಶ್ , ನಗರಸಭೆ ಅಧ್ಯಕ್ಷೆ ಶ್ವೇತಾ , ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ , ಮಾಜಿ ಎಂಎಲ್ ಸಿ ತೂಪಲ್ಲಿ ಚೌಡರೆಡ್ಡಿ , ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ , ಸಮೃದ್ಧಿ ಮಂಜು , ಮಲ್ಲೇಶ್ ಬಾಬು , ಕಿತ್ತಂಡೂರು ನಂಜುಂಡಪ್ಪ , ಸಮಾಜ ಸೇವಕ ಸಿಎಂಆರ್ ಶ್ರೀನಾಥ್ , ಕುರಬೂರು ಶಂಕರೇಗೌಡ , ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ , ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಾಬು ಮೌನಿ ಮತ್ತಿತರರಿದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.