ನ್ಯಾಯಾಲಯದ ತೀರ್ಪಿನಿಂದ ಹಸನ್ಮುಖಿಯಾಗಿರುವ ಮಂಗಳಮುಖಿಯರು
(ವಿಶ್ವಕನ್ನಡಿಗ ನ್ಯೂಸ್ ) ಬೆಂಗಳೂರು : ಮಂಗಳಮುಖಿಯರಿಗೆ ರಾಜ್ಯದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿಯೂ ಶೇ.1ರಷ್ಟು ಹುದ್ದೆಗಳನ್ನು ಮೀಸಲಿಡುವ ಸಂಬಂಧ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಪಿಐಎಲ್, ಸಿಜೆ ಎ.ಎಸ್. ಓಕ್ ಮತ್ತು ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲ ವಿಜಯಕುಮಾರ್ ಪಾಟೀಲ್ ಅವರು ಪೀಠಕ್ಕೆ ಮಾಹಿತಿ ನೀಡಿ, ಸರ್ಕಾರದ ಎಲ್ಲ ಹುದ್ದೆಗಳಲ್ಲಿಯೂ ಶೇ.1ರಷ್ಟು ಹುದ್ದೆಗಳನ್ನು ಮಂಗಳಮುಖಿರಿಗೆ ಮೀಸಲಿಡಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆ ಮಾಡಲಾಗುತ್ತಿದೆ. ಈ ಕುರಿತಂತೆ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ ಎಂದರು.
ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮಗೊಳಿಸಲಾಗುವುದು. ಅದಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು. ಮುಂದಿನ ವಿಚಾರಣೆ ವೇಳೆ ಈ ಕುರಿತಂತೆ ಆದ ಬೆಳವಣಿಗೆಗಳ ಮಾಹಿತಿ ನೀಡುವಂತೆ ಸೂಚಿಸಿ ನ್ಯಾಯಾಲಯ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.
ವರದಿ : ಫಯಾಜ್ ಅಹ್ಮದ್, ವಿಕಲಚೇತನ ವಾಣಿ, ಚಿತ್ರದುರ್ಗ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.