ಕ್ಯಾನ್ಸರ್ ಪೀಡಿತ ಸರಕಾರಿ ನೌಕರರಿಗೆ ಸೌಲಭ್ಯಗಳ ಘೋಷಣೆ
(ವಿಶ್ವಕನ್ನಡಿಗ ನ್ಯೂಸ್ ), ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯ ಮೇರೆಗೆ, ರಾಜ್ಯ ಸರ್ಕಾರವು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವಂತ ನೌಕರರಿಗೆ, ಆರು ತಿಂಗಳವರೆಗೆ ಚಿಕಿತ್ಸೆಗಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಿ ಆದೇಶಿಸಿದೆ
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಬಿ ಎಸ್ ಸುವರ್ಣ ಅವರು ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಸರ್ಕಾರಿ ನೌಕರರು ಕ್ಯಾನ್ಸರ್ ಕಾಯಿಲೆಗೆ ಸಂಬಂಧಿಸಿದಂತೆ ವೈದ್ಯರ ಸಹಲೆಯ ಮೇರೆಗೆ ಕಿಮೋ, ರೇಡಿಯೋ ಥೆರಪಿಯಂತಹ ಚಿಕಿತ್ಸೆಗೆ ಒಳಪಡಬೇಕಿದ್ದು, ಆ ನಿಮಿತ್ತವಾಗಿ ಕಡ್ಡಾಯವಾಗಿ ವಿಶ್ರಾಂತಿಯನ್ನು ಪಡೆಯಬೇಕಿರುವ ಅವಶ್ಯಕತೆಯಿರುವುದರ ಮೇರೆಗೆ, ಕಚೇರಿಗೆ ಹಾಜರಾಗುವುದು ಕಷ್ಟವಾಗುತ್ತದೆ.
ಇದರಿಂದಾಗಿ ವೈದ್ಯಕೀಯ ಪ್ರಮಾಣ ಪತ್ರದ ಆಧಾರ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಪರಿಗಣಿಸುವಂತೆ ಸರ್ಕಾರಿ ನೌಕರರ ಸಂಘವು ಕೋರಿರುತ್ತದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನುಬಂಧ-ಬಿ ರಲ್ಲಿನ ನಿಯಮ 11(ಐ)ರ ನಂತ್ರದಲ್ಲಿ ಈ ಆದೇಶವನ್ನು ಹೊರಡಿಸಿದ ದಿನಾಂಕದಿಂದ ಜಾರಿಗೊಳ್ಳುವಂತೆ ನಿಯಮ 11(ಜೆ) ಎಂಬ ಹೊಸ ನಿಯಮವನ್ನು ಸೇರ್ಪಡೆಗೊಳಿಸಿದೆ
ನಿಯಮ 11(ಜೆ)ರಂತೆ, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ತಜ್ಞರು ರೂಪಿಸುವ ಯೋಜನೆಯನುಸಾರ ಪಡೆಯುವ ಕಿಮೋ, ರೇಡಿಯೋ ಥೆರಪಿ ಚಿಕಿತ್ಸೆ ಮತ್ತು ಸಂಬಂಧದಲ್ಲಿ ಅಗತ್ಯವಾಗುವ ವಿಶ್ರಾಂತಿಯ ಅವಧಿಯ ದಿನಗಳಿಗೆ, ಸಕ್ಷಮ ವೈದ್ಯಕೀಯ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದು, ಒದಗಿಸುವ ಷರತ್ತಿಗೊಳಪಟ್ಟು, ಈ ಚಿಕಿತ್ಸೆಯ ಅವಧಿಯಲ್ಲಿ ಮಾತ್ರ ಗರಿಷ್ಠ ಆರು ತಿಂಗಳುಗಳ ಮಿತಿಗೊಳಪಟ್ಟು, ವಿಶೇಷ ಸಾಂದರ್ಭಿಕ ರಜೆಯನ್ನು ಅನುಮತಿಸತಕ್ಕದ್ದು ಎಂದಿದ್ದಾರೆ
ವರದಿ : ಫಯಾಜ್ ಅಹ್ಮದ್ ವಿಕಲಚೇತನವಾಣಿ, ಚಿತ್ರದುರ್ಗ
https://youtube.com/channel/UC1zTNsJBXNuKbDAdJufYcwA
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.