ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) : – ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು .
ತಾಲ್ಲೂಕಿನ ಯಲ್ಲೂರು ಗ್ರಾಮದಲ್ಲಿ ಮಂಗಳವಾರ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ , ಜನರು ಕೊರೊನಾ ಲಸಿಕೆ ಕುರಿತು ಕೆಲವರು ಮಾಡುತ್ತಿರುವ ಅಪ ಪ್ರಚಾರಕ್ಕೆ ಕಿವಿಗೊಡಬಾರದು . ಲಸಿಕೆ ಬಗ್ಗೆ ಆತಂಕ ಬೇಡ . ಮೂಢ ನಂಬಿಕೆ ಹಾಗೂ ಅಪಪ್ರಚಾರವನ್ನು ನೆಚ್ಚಿಕೊಂಡಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು . ಕಿಸಾನ್ ರೈಲು ಸೇವೆ ಪ್ರಾರಂಭಿಸಿರುವುದರಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಿದೆ . ಅದರಲ್ಲೂ ಮಾವು ಬೆಳೆಗಾರರಿಗೆ ತುಂಬಾ ಅನುಕೂಲವಾಗಿದೆ . ಮಾವಿಗೆ ಬೆಲೆ ಕುಸಿತ ಉಂಟಾಗಿದ್ದು , ರೈತರು ಸಂಕಷ್ಟ ಎದುರಿಸುತ್ತಿದ್ದಾರೆ . ಬೆಂಬಲ ಬೆಲೆ ನೀಡುವಂತೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು .
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ // ಕೆ.ಎನ್. ವೇಣುಗೋಪಾಲ್ ಮಾತನಾಡಿ , ಕೊರೊನಾ ಸೋಂಕು ಹಾಗೂ ಲಾಕ್ ಡೌನ್ನಿಂದಾಗಿ ಗ್ರಾಮೀಣ ಪ್ರದೇಶದ ಜನರ ಬದುಕು ದುಸ್ತರವಾಗಿದೆ . ಬಡವರು ಹೆಚ್ಚು ಸಂಕಷ್ಟಕ್ಕೆ ಒಳಗಾಗಿದ್ದಾರೆ . ಆದ್ದರಿಂದ ಅವರಿಗೆ ಒಂದಿಷ್ಟು ನೆರವು ನೀಡುವ ಉದ್ದೇಶದಿಂದ ದಿನಸಿ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು .
ಶ್ರೀನಿವಾಸಪುರದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು . ಸಂಸದ ಎಸ್.ಮುನಿಸ್ವಾಮಿ ಅವರು , ಈಚೆಗೆ ಕೋಡ್ನಿಂದ ನಿಧನರಾದ ಇಬ್ಬರು ಪತ್ರಕರ್ತರ ಕುಟುಂಬಗಳಿಗೆ ತಲಾ ರೂ .೫೦ ಸಾವಿರ ನೀಡಿದರು . ತಾಲ್ಲೂಕಿನ ಕೋಟಪಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು .
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎ.ಅಶೋಕ್ ರೆಡ್ಡಿ , ಮಾಜಿ ಅಧ್ಯಕ್ಷ ಕೊಟಗುಳಿ ನಾರಾಯಣಸ್ವಾಮಿ , ಜಿಲ್ಲಾ ಉಸ್ತುವಾರಿ ಜಯಚಂದ , ಮುಖಂಡರಾದ ಎಂ.ಲಕ್ಷಣಗೌಡ , ಬಾಲಾಜಿ , ಶ್ರೀನಿವಾಸರೆಡ್ಡಿ , ಮಂಜು , ಪದ್ಮನಾಭ್ , ಷಫಿವುಲ್ಲಾ , ಅಶೋಕರಡ್ಡಿ , ಎಂ.ವೇಮಣ್ಣ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.