ಉಡುಪಿ(ವಿಶ್ವಕನ್ನಡಿಗ ನ್ಯೂಸ್): 2021 ರ ಎರಡನೇ ಕೋವಿಡ್ ಅಲೆಯು ದೇಶಾಧ್ಯಂತ ಬಹಳಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ದೇಶದ ವಿವಧ ಸ್ಥರದ ನಾಗರೀಕರು ವಿವಿಧ ರೀತಿಯಲ್ಲಿ ಸಮಸ್ಯೆಗೀಡಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಬಹಳಷ್ಟು ಹೊಡೆತ ಬಿದ್ದಿದೆ. ವಿದ್ಯಾರ್ಥಿಗಳು ಶಿಕ್ಷಕರು, ಸರಕಾರದ ಅವೈಜ್ಞಾನಿಕ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಈ ಸಮಸ್ಯೆಯನ್ನು ನಾವು ಕಾಣಬಹುದಾಗಿದೆ. ಸರಕಾರ ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಶಾಲಾ ಶಿಕ್ಷಕರು ಸೂಕ್ತ ಸಮಯಕ್ಕೆ ಸಂಬಳ ಸಿಗದೆ ಕಂಗಾಲಾಗಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ಪಠ್ಯ ಕ್ರಮದಿಂದಲೂ ವಂಚಿತರಾಗುತ್ತಿದ್ದಾರೆ. ಸರಕಾರ ಆನ್ ಲೈನ್ ಶಿಕ್ಷಣವನ್ನು ಆರಂಭಿಸಿದರು ಸೂಕ್ತ ವ್ಯವಸ್ಥೆಯಿಲ್ಲದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಮಕ್ಕಳು ಶೈಕ್ಷಣಿಕ ಚಟುವಟಿಕೆಗಳನ್ನು ತೊರೆದು ಬಾಲ ಕಾರ್ಮಿಕದಂತಹ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇನ್ನೂ ಮನೆಯಲ್ಲಿ ಇರುವ ವಿದ್ಯಾರ್ಥಿಗಳು ಬಹಳಷ್ಟು ಮಾನಸಿಕ ಒತ್ತಡಕ್ಕೂ ತುತ್ತಾಗುತ್ತಿದ್ದಾರೆ. ಇಂತಹ ಸಂಧಿಗ್ದ ಪರಿಸ್ಥಿತಿಯಲ್ಲಿ ಸರಕಾರ ಮಧ್ಯ ಪ್ರವೇಶಿಸಿ ಈ ಕೆಳಗಿನ ಬೇಡಿಕೆಗಳನ್ನು ಪೂರೈಸ ಬೇಕೆಂದು ಎಸ್ ಐ ಓ ಉಡುಪಿ ಜಿಲ್ಲಾ ವತಿಯಿಂದ ಆಗ್ರಹಿಸುತ್ತಿದ್ದೇವೆ.
ಬೇಡಿಕೆಗಳು :-
1. ಖಾಸಗೀ ಶಾಲೆಗಳು ಶಿಕ್ಷಕರಿಗೆ ಸಂಬಳ ಕೊಡದೆಯಿರುವ ಈ ಸಂದರ್ಭದಲ್ಲಿ ಸರಕಾರ ಸೂಕ್ತ ಪರಿಹಾರವನ್ನು ಪ್ರತಿ ತಿಂಗಳು ನೀಡಬೇಕು.
2. ಕೆಲವು ಖಾಸಗಿ ಶಾಲೆಗಳು ಕೋವಿಡ್ ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೆಲಸದಿಂದ ವಜಾ ಗೊಳಿಸುವಂತಹ ಅಮಾನವೀಯ ಕೆಲಸಗಳನ್ನು ಮಾಡುತ್ತಿದ್ದು ಸರಕಾರ ಮಧ್ಯ ಪ್ರವೇಶಿಸಿ ಇದನ್ನು ಕೂಡಲೇ ನಿಲ್ಲಿಸಬೇಕು.
3. ಸರಕಾರ ಆನ್ ಲೈನ್ ಶಿಕ್ಷಣ ಆರಂಭಿಸುವ ಮುನ್ನ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣಕ್ಕೆ ಬೇಕಾಗಿರುವ ಮೊಬೈಲ್ ಮತ್ತು ನೆಟ್ ವರ್ಕ ವ್ಯವಸ್ಥೆಯನ್ನು ಕಲ್ಪಿಸಬೇಕು.
4. ಸರಕಾರ ಶಾಲಾ ಮಕ್ಕಳಿಗೆ ಒದಗಿಸುವ ಪಠ್ಯ ಪುಸ್ತಗಳನ್ನು ಸೂಕ್ತ ಸಮಯಕ್ಕೆ ಒದಗಿಸಬೇಕು.
5. ಕೋವಿಡ್ ಸಂದರ್ಭದಲ್ಲಿ ಹಲವು ಮಕ್ಕಳು, ಮುಖ್ಯವಾಗಿ ವಲಸೆ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿರುವುದು ಮೋಲ್ನೋಟಕ್ಕೆ ಕಂಡುಬರುತ್ತಿದೆ. ಸರಕಾರ ಈ ಬಗ್ಗೆ ಸರ್ವೆ ನಡೆಸಿ ಒಂದು ಮಗುವು ಕೂಡ ಶಿಕ್ಷಣ ವಂಚಿತರಾಗದಂದತೆ ಕ್ರಮ ವಹಿಸುವುದು.
ಈ ಮೇಲಿನ ಬೇಡಿಕೆಗಳನ್ನು ಶೀಘ್ರವೇ ಜಾರಿಗೊಳಿಸಬೇಕೆಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ಉಡುಪಿ ಜಿಲ್ಲೆಯ ಆಗ್ರಹಿಸುತ್ತಿದೆ.
ಗೋಷ್ಟಿಯಲ್ಲಿ ಉಪಸ್ಥಿತರು.
ಅರ್ಬಾಝ್ ಅಹಮದ್, ಜಿಲ್ಲಾಧ್ಯಕ್ಷರು, ಎಸ್ ಐ ಓ ಉಡುಪಿ ಜಿಲ್ಲೆ
ಡಾ. ಫಹೀಮ್ ಹೂಡೆ, ಕ್ಯಾಂಪಸ್ ಕಾರ್ಯದರ್ಶಿ, ಉಡುಪಿ ಜಿಲ್ಲೆ.
ಅಫ್ವಾನ್ ಬಿ ಹೂಡೆ, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ, ಉಡುಪಿ ಜಿಲ್ಲೆ
ಅಯಾನ್ ಮಲ್ಪೆ, ಸ್ಥಾನೀಯ ಅಧ್ಯಕ್ಷರು, ಎಸ್ ಐ ಓ ಮಲ್ಪೆ ಘಟಕ.
ವಸೀಮ್ ಗುಜ್ಜರಬೆಟ್ಟು, ಸ್ಥಾನೀಯ ಅಧ್ಯಕ್ಷರು, ಎಸ್ ಐ ಓ ಹೂಡೆ ಘಟಕ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.