ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) :- ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು . ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮಗ್ರ ಕಲಿಕಾ ಯೋಜನೆಯಡಿ , ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ , ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಥಿಗಳು , ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ.
ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವುದಕ್ಕೆ ಹೆಮ್ಮೆ ಪಡಬೇಕು ಎರಡೂ ಕಡೆ ಒಂದೇ ಪಠ್ಯ ಬೋಧನೆ ಇರುವುದರಿಂದ ವಿದ್ಯಾರ್ಥಿಗಳು ಸರ್ಕಾರಿ ಶಾಲಾ ಕಾಲೇಜಿಗೆ ಸೇರಬೇಕು ಎಂದು ಹೇಳಿದರು . ಕಾಲೇಜಿಗೆ ಕಾಂಪೌಂಡ್ ಹಾಗೂ ಮಹಾದ್ವಾರ ನಿರ್ಮಿಸಲಾಗುವುದು . ವಿದ್ಯಾರ್ಥಿಗಲ ಕಲಿಕೆಗೆ ಕೊರತೆ ಆಗದಂತೆ , ಅಗತ್ಯವಾದ ಎಲ್ಲ ಸೌಕರ್ಯ ಕಲಿಸಲಾಗುವುದು ಎಂದು ಹೇಳಿದರು .
ಪ್ರಾಂಶುಪಾಲ ಪ್ರೊ . ಕೆ.ವಿ.ವೆಂಕಟೇಶ್ , ಪ್ರಧ್ಯಾಪಕರಾದ ವೆಂಕಟರಾಮಯ್ಯ , ಮಂಜುನಾಥ್ , ಪದ್ಯ , ಮುಖಂಡ ಕೆ.ಕೆ.ಮಂಜು , ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.