ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) :- ಅಧಿಕಾರಿಗಳು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಭಿಯಾನ ಕಾರ್ಯಕ್ರಮದಡಿ ಏರ್ಪಡಿಸಿದ್ದ ಸಮಾರಂಭದಲ್ಲಿ ರೈತರಿಗೆ ತೊಗರಿ ಕಿರು ಚೀಲ ವಿತರಿಸಿ . ಮಾತನಾಡಿದರು . ಬೇರೆ ಬೇರೆ ಕಾರಣಗಳಿಂದ ಇಂದು ಕೃಷಿ ನಷ್ಟದ ಕಸುಬಾಗಿ ಪರಿಣಮಿಸಿದೆ . ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳಿಗೆ ಬೆಲೆ ಕುಸಿತ ಸಾಮಾನ್ಯವಾಗಿದೆ .
ಇದರಿಂದ ರೈತರು ಕಂಗಾಲಾಗಿದ್ದಾರೆ ಸಾಲ ಸೋಲ ಮಾಡಿ ಬೆಳೆ ಇಟ್ಟಿರುವ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಆದ್ದರಿಂದ ರೈತ ಸಂಬಂಧ ಇಲಾಖೆಗಳ ಅಧಿಕಾರಿಗಳು ಕೃಷಿ ಹಾಗೂ ಪಶುಪಾಲನೆ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು .
ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಧನಂಜಯ್ ಮಾತನಾಡಿ , ರೈತರು ಕೃಷಿ ಇಲಾಖೆಯೊಂದಿಗೆ ಸಂಪರ್ಕ ಬೆಳಸಬೇಕು . ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ಪಡೆದು , ಬಳಸಿಕೊಳ್ಳಬೇಕು . ಕೃಷಿಕಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೂ ಸಮೀಪದ ಕೃಷಿ ಕೇಂದ್ರದ ಅಧಿಕಾರಿಗಳಿಂದ ಪರಿಹಾರ ಪಡೆದುಕೊಳ್ಳಬೇಕು ಎಂದು ಹೇಳಿದರು .
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ್ , ರೇಷ್ಮೆ ಇಲಾಖೆಯ ಸಹಾಯಕ ನಿದೇಶಕ ನಾಗರಾಜ್ , ಕೃಷಿ ಅಧಿಕಾರಿ ಈಶ್ವರ್ , ತಾಲ್ಲೂಕು ಕೃಷಿ ಪರಿಕರ ಸಂಘದ ಅಧ್ಯಕ್ಷ ಕೋಟೇಶ್ , ಕಾಲೂಕು ರೈತ ಸಂಘದ ಅಧ್ಯಕ್ಷ ಶ್ರೀರಾಮರೆಡ್ಡಿ , ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ , ಬೈರಾರೆಡ್ಡಿ , ರಮೇಶ್ , ಆಸ್ತಂ ಇದ್ದರು . ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.