ಬಳ್ಳಾರಿ (www.vknews.com) : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ.” ಅಭಿಯಾನದ ಭಾಗವಾಗಿ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ , ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮತ್ತು ಹೊಸಪೇಟೆ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ , ಮಕ್ಕಳ ಕಲ್ಯಾಣಾಧಿಕಾರಿ , ಕಾರ್ಮಿಕ ಅಧಿಕಾರಿ ಹಾಗೂ ಸಿರುಗುಪ್ಪ ತಹಶೀಲ್ದಾರ್ , ಕ್ಷೇತ್ರ ಶಿಕ್ಷಣಾಧಿಕಾರಿ, ಮಕ್ಕಳ ಕಲ್ಯಾಣಾಧಿಕಾರಿ, ಕಾರ್ಮಿಕ ಅಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು , ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು,ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಜಂಟಿ ಕಾರ್ಯದರ್ಶಿ ಹಬೀಬ್, ಜಿಲ್ಲಾ ಕೋಶಾಧಿಕಾರಿ ಯುಸೂಫ್, ಸಮಿತಿ ಸದಸ್ಯರಾದ ರಸೂಲ್ , ಯೂನಿಟ್ ಕಾರ್ಯದರ್ಶಿ ಇರ್ಫಾನ್ , ಹಾಗೂ ಟಿಪ್ಪು ಸುಲ್ತಾನ್ ಮತ್ತಿತರು ಉಪಸ್ಥಿತರಿದ್ಧರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.