ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಎನ್.ಎಫ್.ಎಸ್.ಎ ಫಲಾನುವಿಗಳಿಗೆ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಸದ್ಯಸರಿಗೆ ಜುಲೈ -2021 ರ ಮಾಹೆಗೆ 5 ಕೆ.ಜಿ ಯಂತೆ ಅಕ್ಕಿ ಉಚಿತವಾಗಿ ಹಂಚಿಕೆ ನೀಡಲಾಗಿದೆ .
ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದರಾರಿಗೆ 20 ಕೆ.ಜಿ ಎಂಎಸ್ಪಿ ರಾಗಿ ಮತ್ತು 15 ಅಕ್ಕಿ ಮತ್ತು ಆದ್ಯತಾ ಪಡಿತರ ಚೀಟಿಯ ಪ್ರತಿ ಸದ್ಯಸರಿಗೆ 3 ಕೆ.ಜಿ ಎಂಎಸ್ಪಿ ರಾಗಿ 2 ಕೆ.ಜಿ ಅಕ್ಕಿ ಹಾಗೂ ಪ್ರತಿ ಆದ್ಯತಾ ಪಡಿತರ ಚೀಟಿಗೆ 2 ಕೆ.ಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಆಹಾರ , ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ .
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.