ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ):- ವೈದ್ಯರ ದಿನಾಚರಣೆ ಪ್ರಯುಕ್ತ ರೈತಸಂಘದಿಂದ ನಗರದ ಎಸ್ ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು .
ಈ ಸಂದರ್ಭದಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಕಳೆದ ಒಂದು ವರ್ಷದಿಂದಲೂ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ಸಂಕಷ್ಟದ ಸಮಯದಲ್ಲಿಯೂ ವೈದ್ಯರು ಜನರ ಆರೋಗ್ಯಕ್ಕಾಗಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಿರುವುದು ಶ್ಲಾಘನೀಯವಾಗಿದೆ.
ಕೊರೊನಾ ಸೋಂಕು ಕಾಣಿಸಿಕೊಂಡರೂ ಚಿಕಿತ್ಸೆ ಪಡೆದುಕೊಂಡು ಪುನಃ ಜನರ ಆರೋಗ್ಯದ ಸೇವೆಗೆ ವೈದ್ಯರು ಮುಂದಾಗುತ್ತಿದ್ದು , ವೈದ್ಯೋ ನಾರಾಯಣೋ ಹರಿ ಎಂಬಂತೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದ ಅನೇಕ ವೈದ್ಯರು ಈಗಾಗಲೇ ಕೊರೊನಾಗೆ ಬಲಿಯಾಗಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಸ್ಮರಿಸಿದರು .
ಈ ಸಂದರ್ಭದಲ್ಲಿ ಎಸ್ಸೆನ್ಸಾರ್ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ರವಿಕುಮಾರ್ , ವೈದ್ಯರಾದ ಡಾ.ಬಾಲಸುಂದರ್ , ಡಾ .ಶಾಂತಾ , ಡಾ.ಶ್ರೀನಾಥ್ , ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಎ.ನಳಿನಿಗೌಡ , ವಕ್ಕಲೇರಿ ಹನುಮಯ್ಯ ಮತ್ತಿತರರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.