ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ):- ಕೊರೊನಾದಿಂದಾಗಿ ಗ್ರಾಮೀಣ ಪ್ರದೇಶದಲ್ಲೂ ನೆಮ್ಮದಿ ಹಾಳಾಗಿದೆ ಎಂದು ರವೀಂದ್ರಾಚಾರ್ ಚಾರಿಟ ಬಲ್ ಟ್ರಸ್ಟ್ ಅಧ್ಯಕ್ಷ ವೈ.ಆರ್ . ರಾಮಾನುಜಾಚಾರ್ ಹೇಳಿದರು.
ತಾಲ್ಲೂಕಿನ ಯರಂವಾರಿಪಲ್ಲಿ ಗ್ರಾಮದಲ್ಲಿ ರವೀಂದ್ರಾಚಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ , ಕೋರೋನಾ ಸಂಕಷ್ಟದಿಂದ ಪಾರಾಗಲು ಸಾಂಘಿಕ ಪ್ರಯತ್ನ ಮಾಡಬೇಕಾಗಿದೆ. ಅದಕ್ಕೆ ನಗರ , ಹಳ್ಳಿ ಎಂಬ ಭೇದವಿಲ್ಲ.
ಗ್ರಾಮೀಣ ಪ್ರದೇಶದ ಜನರೂ ಸಹ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಹೇಳಿದರು. ಎರಡನೇ ಅಲೆ ಗ್ರಾಮೀಣ ಪ್ರದೇಶವನ್ನು ಹೆಚ್ಚಾಗಿ ಕಾಡಿದೆ . ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ . ನಾವು ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರುತ್ತದೆ. ಅನಾಹುತಗಳಿಂದ ಸಾಮಾಜಿಕ ಹಾಗೂ ಕೌಟುಂಬಿಕ ವಿಘಟನೆ ನಡೆಯುತ್ತದೆ. ಅನಾಥ ಭಾವ ಕಾಡುತ್ತದೆ. ಇದೆಲ್ಲವನ್ನೂ ನಿಯಂತ್ರಿಸಲು ಪೂರಕವಾಗಿ ವರ್ತನೆ ಇರಬೇಕು ಎಂದು ಹೇಳಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ , ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್ , ಮಾಜಿ ಸದಸ್ಯ ಕೆ.ಕೆ. ಮಂಜುನಾಥರೆಡ್ಡಿ , ಮುಂತಾದವರು ಹಾಜರಿದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.