ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಭಾರತೀಯ ಜನತಾ ಪಾರ್ಟಿ (ಬಿ.ಜೆ.ಪಿ) ಯ ಮಾಲೂರು ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಯುವ ಉತ್ಸಾಹಿ, ಸಂಘಟನಾ ಚತುರ, ವೆಂಕಟೇಶ್ ಕುಮಾರ್ ಪಿ ರವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.
ಸುಮಾರು ವರ್ಷಗಳಿಂದ ಪಕ್ಷದ ಪ್ರಮಾಣಿಕ ಹಾಗೂ ನಿಷ್ಟೆಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವ ವೆಂಕಟೇಶ್ ಕುಮಾರ್ ಅವರಿಗೆ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿ ಗೌರವಿಸಬೇಕು ಎಂಬ ಆಶಯದಿಂದ ಅವರ ಕಾಳಜಿ, ಪಕ್ಷನಿಷ್ಟೆ, ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತಿರುವುದನ್ನು ಮನಗಂಡು ಮಾಲೂರು ತಾಲ್ಲೂಕು ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷರಾದ ಪುರ ನಾರಾಯಣಸ್ವಾಮಿ ರವರು ವೆಂಕಟೇಶ್ ಕುಮಾರ್ ರವರನ್ನು ಬಿ.ಜೆ.ಪಿ ತಾಲ್ಲೂಕು ಪ್ರಧಾಬ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.
ಈ ಸಂದರ್ಭದಲ್ಲಿ ತಾಲ್ಲೂಕು ಬಿ.ಜೆ.ಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ವೇಣುಗೋಪಾಲ್ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ರೆಡ್ಡಿ, ಮನೋಹರ್ ಇವರಗಳನ್ನು ಸಹ ಆಯ್ಕೆ ಮಾಡಲಾಗಿದೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.