ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ) :ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕಲಾವಿದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರರ ಮನೆಗೆ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಸುಬ್ರಹ್ಮಣ್ಯ ಮೊಗವೀರರಿಗೆ ಆರ್ಥಿಕ ಸಹಾಯಧನ ನೀಡಿ ಧೈರ್ಯ ತುಂಬಿದರು. ವಾಸಿಸಲು ಸರಿಯಾದ ಮನೆ ಇಲ್ಲದಿರುವುದನ್ನು ಗಮನಿಸಿದ ಶಾಸಕರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿ ಕೊಡುವುದಾಗಿ ತಿಳಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಮನೆ ನಿರ್ಮಿಸಲು ಬೇಕಾಗುವ ಹೆಂಚುಗಳನ್ನು ಸ್ವತಃ ಉಚಿತವಾಗಿ ಒದಗಿಸುವುದಾಗಿಯೂ, ಅಗತ್ಯ ಎಲ್ಲಾ ಸಲಕರಣೆಗಳನ್ನು ಸ್ಥಳಿಯ ಮುಖಂಡರ ಮೂಲಕವಾಗಿ ಉಚಿತವಾಗಿ ಕೊಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.