ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) :- ಕೋವಿಡ್ ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾಗಿ ಸ್ವಂತ ಊರುಗಳಿಗೆ ಹೋಗಲಾಗದ ಕಟ್ಟಡನಿರ್ಮಾಣ ಹಾಗೂ ವಲಸೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಅಗತ್ಯವಿರುವ ಎಲ್ಲಾ ಸೌಲಭ್ಯ ಒದಗಿಸಿದೆ ಎಂದು ಕಾರ್ಮಿಕ ಇಲಾಖೆ ಅಪರ ಆಯುಕ್ತ ನರಸಿಂಹಮೂರ್ತಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾಡಳಿತ , ಕಾರ್ಮಿಕ ಇಲಾಖೆ , ವಕೀಲರ ಸಂಘದ ಆಶ್ರಯದಲ್ಲಿ ನರಸಾಪುರ ಕೈಗಾರಿಕಾ ಪ್ರದೇಶದ ವಿಸ್ಟನ್ ಕಂಪನಿ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಟ್ಟಡ ಕಾರ್ಮಿಕರು ಕೊರೋನಾ ಹೊಡೆತಕ್ಕೆ ಸಿಲುಕಿ ತಮ್ಮ ಊರುಗಳಿಗೆ ಹೋಗಲಾಗದೇ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದರು ಇಂತಹ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ ಕಾರ್ಮಿಕ ಇಲಾಖೆ ಅಗತ್ಯ ಸೌಲಭ್ಯ ಒದಗಿಸಿದೆ ಎಂದು ತಿಳಿಸಿದರು.
ಕಟ್ಟಡ ಕಾರ್ಮಿಕರು ತಮ್ಮ ಹೆಸರನ್ನು ಇಲಾಖೆಯಲ್ಲಿ ನೋಂದಾಯಿಸಿ ಗುರುತಿನ ಚೀಟಿ ಪಡೆದುಕೊಂಡು ಸರ್ಕಾರದಿಂದ ಸಿಗುವ ಸೌಲಭ್ಯ ತಮ್ಮದಾಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಟ್ಟಡ ಕಾರ್ಮಿಕರು ಆರೋಗ್ಯ ರಕ್ಷಣೆಗೆ ಒತ್ತು ನೀಡುವಂತೆ ಸಲಹೆ ನೀಡಿದ ಅವರು , ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಕೆಲಸ ಮಾಡುವಾಗ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಳ್ಳಿ , ಜೀವ ಉಳಿದರೆ ಮಾತ್ರ ಜೀವನ ಎಂಬುದನ್ನು ಮರೆಯದಿರಿ ಎಂದರು.
ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ , ಕರ್ನಾಟಕ ಸರ್ಕಾರ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ನೀಡಿದ್ದು , ಅವುಗಳನ್ನು ಪಡೆದುಕೊಳ್ಳಲು ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ನೀಡುವ ಉಚಿತ ಕಾನೂನು ನೆರವನ್ನು ಪಡೆದುಕೊಳ್ಳಲು ಸಲಹೆ ನೀಡಿದ ಅವರು , ನಿಮ್ಮ ನೆರವಿಗೆ ವಕೀಲರ ಸಂಘವೂ ಇದೆ ಎಂದು ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮಂತ ಪಾಟೀಲ್ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸಿಗುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿ , ಕಾರ್ಮಿಕರು ಇಲಾಖೆಯನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪಕಾರ್ಮಿಕ ಆಯುಕ್ತ ಗುರುಪ್ರಸಾದ್ , ಸಹಾಯಕ ಕಾರ್ಮಿಕ ಆ ಯಉಕ್ಕ ತಮ್ಮಣ್ಣ , ಹಿರಿಯ ವಕೀಲ ಕೆ.ಆರ್.ಧನರಾಜ್ , ಸ್ವಾಸ್ಥ್ಯ ಇಲಾಖೆ ಅಪರ ನಿರ್ದೇಶಕ ಆಂಜಿನಪ್ಪ , ಕಾರ್ಮಿಕ ನಿರೀಕ್ಷಕರಾದ ರಾಜೇಶ್ವರಿ , ಮಂಜುನಾಥ್ ಪ್ರಸಾದ್ ಮತ್ತಿತರರು ಹಾಜರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.