ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ತಾಲೂಕಿನ ಬಿ ಕಸ್ಬಾ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಕಲ್ಲಗುಡ್ಡೆ ನಿವಾಸಿ ಸೋಮನಾಥ ಸಾಲಿಯಾನ್ ಬಿನ್ ಪರಮೇಶ್ವರ ಮೂಲ್ಯ ಅವರ ಮನೆಗೆ ಪಕ್ಕದ ಧರೆ ಕುಸಿದು ಬಿದ್ದ ಪರಿಣಾಮ ಮನೆಯ ಒಂದು ಪಾಶ್ರ್ವ ಸಂಪೂರ್ಣ ಹಾನಿಗೊಂಡಿದೆ.
ಸೋಮನಾಥ ಸಾಲ್ಯಾನ್ ಅವರ ಒಡೆತನದ ಈ ಮನೆಯಲ್ಲಿ ನವೀನ್ ಎಂಬವರು ಕುಟುಂಬ ಸಹಿತ ಬಾಡಿಗೆ ನೆಲೆಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಪಕ್ಕದ ಧರೆ ಮನೆಯ ಪಾಶ್ರ್ವಕ್ಕೆ ಕುಸಿದು ಬಿದ್ದಿದೆ. ಘಟನೆಯಿಂದ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಮನೆ ಹಾನಿಯಾಗಿದೆ. ಘಟನ ಸ್ಥಳಕ್ಕೆ ಬುಡಾ ಅಧ್ಯಕ್ಷರು, ಸ್ಥಳೀಯ ಪುರಸಭಾ ಸದಸ್ಯರು ಹಾಗೂ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಷ್ಟದ ಅಂದಾಜು ನಡೆಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.