ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ಪಟ್ಟಣ್ಣದ ಸಾಯಿ ಬಡಾವಣೆಯ 23 ನೇ ವಾರ್ಡಿನ ಪುರಸಭಾ ಸದಸ್ಯರಾದ ಶ್ರೀಮತಿ ಪವಿತ್ರ ರಾಘವೇಂದ್ರ ರವರು ಎಸ್.ಎಫ್.ಸಿ ಯೋಜನೆಯಡಿ ನಡೆಯುತ್ತಿರುವ ಉತ್ತಮ ರಸ್ತೆಯ ಅಭಿವೃದ್ದಿ ಕಾಮಗಾರಿ ವಿಕ್ಷೀಸಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಪುರಸಭಾ ಸದಸ್ಯರಾದ ಶ್ರೀಮತಿ ಪವಿತ್ರಾ ರಾಘವೇಂದ್ರ ಮಾಲೂರು ಪಟ್ಟಣ್ಣದ ತಾಲ್ಲೂಕು ಎಲ್ಲಾ ವಾರ್ಡಗಳ ಅಭಿವೃದ್ದಿ ದೃಷ್ಟಿಯಿಂದ ಎಸ್.ಎಫ್.ಸಿ ಯೋಜನೆಯ ಅಡಿಯಲ್ಲಿ ಮಂಜೂರು ಆಗಿರುವ 8 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ, ಡಾಂಬರೀಕರಣ, ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾಮಗಾರಿಗಳು ನಡೆಯುತ್ತಿದ್ದು ನಮ್ಮ ವಾರ್ಡ್ ಗೆ ಸಂಬಂಧಿಸಿದಂತೆ 20 ಲಕ್ಷ ರೂಗಳ ವೆಚ್ಚದಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ರಸ್ತೆ ಅಭಿವೃದ್ದಿ, ಚರಂಡಿ ಅಭಿವೃದ್ಧಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸ್ಪಂದಿಸುವುದೇ ನಮ್ಮ ಪ್ರಮುಖ ಉದ್ದೇಶ ಆಗಿದೆ ಎಂದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.