ಮಡಿಕೇರಿ(www.vknews.com): ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಈಗಾಗಲೇ ಯುಎಇ, ಕತಾರ್, ಬಹರೈನ್ ಹಾಗೂ ಸೌದಿ ಅರೇಬಿಯಾ ಸಮಿತಿಯು ಕಾರ್ಯಾಚರಿಸುತ್ತಿದ್ದು, ಮುಂದುವರಿದು ಒಮಾನ್ ಕೇಂದ್ರೀಕರಿಸಿ ಕಾರ್ಯನಿರ್ವಹಿಸಲು ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಆನ್- ಲೈನ್ ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಉಪಾಧ್ಯಕ್ಷರಾದ ಝೈನುದ್ದೀನ್ ಉಸ್ತಾದರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೂಫಿ ದಾರಿಮಿ ಕುಶಾಲನಗರ ನೂತನ ಸಮಿತಿಯನ್ನು ಘೋಷಿಸಿ ಮಾತನಾಡುತ್ತಾ, ಸಂಘಟನೆಯ ಮಹತ್ವದ ಬಗ್ಗೆ ವಿವರಿಸಿದರು.
ಎಸ್.ಕೆ .ಎಸ್.ಎಸ್ ಎಫ್- ಒಮಾನ್ ಕೊಡಗು ನೂತನ ಸಮಿತಿಯ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಶಫೀಕ್ ನೆಲ್ಲಿಯಹುದಿಕೇರಿ, ಕೋಶಾಧಿಕಾರಿಯಾಗಿ ಅಬ್ದುಲ್ ಗಫೂರ್ ಲತೀಫಿ, ಉಪಾಧ್ಯಕ್ಷರಾಗಿ ಅಬ್ದುಲ್ ಅಝೀಝ್ ಬಾಖವಿ, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಕುಂಜಿಲ ಆಯ್ಕೆಯಾಗಿದ್ದಾರೆ. ನಿರ್ದೇಶಕ ಸಮಿತಿ ಸದಸ್ಯರಾಗಿ ಅಶ್ರಫ್ ಬಾಖವಿ ಯರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ನಾಯಕರುಗಳು ಮತ್ತು ಯುಎಇ, ಕತಾರ್, ಸೌದಿ ಅರೇಬಿಯಾ ಹಾಗೂ ಬಹರೈನ್ ಸಮಿತಿಯ ಪ್ರತಿನಿಧಿಗಳು ಮತ್ತು SKSSF ಜಿಲ್ಲಾ, ಶಾಖಾ ಸಮಿತಿಯ ಸದಸ್ಯರುಗಳು ಹಾಗೂ ನೇತಾರರು ಭಾಗವಹಿಸಿದ್ದರು.
ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಸಮಿತಿ ಪ್ರಧಾನ ಕಾರ್ಯದರ್ಶಿ ಶಿಹಾಬ್ ಆಲುಂಗಲ್ ಸ್ವಾಗತಿಸಿ, ಮಾಧ್ಯಮ ವಿಭಾಗದ ಸಂಚಾಲಕರಾದ ಯಹ್ಯಾ ಕೊಡ್ಲಿಪೇಟೆ ವಂದಿಸಿದರು. ಅಶ್ಫಾಕ್ ಕೊಡ್ಲಿಪೇಟೆ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.