ಅಬುಧಾಬಿ (www.vknews.com) : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ನಾಳೆ ಜುಲೈ 18ಕ್ಕೆ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಯುವಕರಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು,
ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ತಮ್ಮ ಮುಂದಿನ ಕೋರ್ಸ್ ಯಾವುದು ತೆಗೆಯಬೇಕು, ಹಾಗೆ ಸ್ನಾತಕೋತ್ತರ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣ ಯಾವ ರೀತಿ ಪಡೆಯಬೇಕು ಎಂಬುದರ ಬಗ್ಗೆ ತಜ್ಞರಿಂದ ಮಾಹಿತಿ ನೀಡಲ್ಪಡುತ್ತದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹೆಮ್ಮೆಯ ದುಬೈ ಕನ್ನಡ ಸಂಘದ ಅಧ್ಯಕ್ಷರಾದ ಶ್ರೀಮತಿ ಮಮತಾ ಮೈಸೂರು ಅವರು ಪಾಲ್ಗೊಳ್ಳಲಿದ್ದು ರಾಫೆಲ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಉಪ ಪ್ರಿನ್ಸಿಪಾಲ್ ಶ್ರೀ ತನ್ವೀರ್ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಸೈನ್ ಸೋಮವಾರಪೇಟೆ ಅವರು ವಹಿಸಲಿದ್ದಾರೆ, ಮಂಗಳೂರಿನ ರಫೀಕ್ ಮಾಸ್ಟರ್ ಅವರು ವೃತ್ತಿ ಶಿಕ್ಷಣ ಮಾರ್ಗದರ್ಶನ ಬಗ್ಗೆ ತರಗತಿ ನಡೆಸಿಕೊಡಲಿದ್ದು ಬೆಂಗಳೂರಿನ ಶ್ರೀ ಗುರು ನಾಡಕರಣಿ ಅವರು ವ್ಯಕ್ತಿತ್ವ ವಿಕಸನ ಬಗ್ಗೆ ತರಗತಿ ನಡೆಸಿಕೊಡುತ್ತಾರೆ, ಹಳೆ ವಿದ್ಯಾರ್ಥಿಗಳ ಸಂಘದ ಮುಖ್ಯ ಸಂಯೋಜಕರಾದ ಮೆಹಬೂಬ್ ಸಾಬ್ ಮಾಸ್ಟರ್ ಅವರು ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲಭ್ಯವಿರುವ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕಾರ್ಯಕ್ರಮದ ಪ್ರಯುಕ್ತ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಹುಸೈನ್ ಸೋಮವಾರಪೇಟೆ, ಅಬ್ದುಲ್ಲಾ ಕೊಂಡಂಗೇರಿ, ರಫೀಕಲಿ ಕುಂಡಂಡ ಕುಂಜಿಲ, ಶಾಫಿ ಅಜಾದ್ ನಗರ ಕೊಟ್ಟಮುಡಿ, ನೌಶೀರ್ ಎಡಪಲ ಮತ್ತು ಶಾಮ್ ನಾಪೋಕ್ಲು ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.