ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮೊದಲ ಬಾರಿಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆ ಮೇರೆಗೆ ಜುಲೈ 26ರ ಬಳಿಕ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಜುಲೈ 25ಕ್ಕೆ ಹೈಕಮಾಂಡ್ ನಿಂದ ಸೂಚನೆ ಬರುತ್ತದೆ, ಅದರಂತೆ ನಡೆದುಕೊಳ್ಳುತ್ತೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಜುಲೈ 26ಕ್ಕೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷಗಳಾಗುತ್ತದೆ.ಮುಂದಿನ ಎರಡು ವರ್ಷ ಪಕ್ಷಕ್ಕಾಗಿ ಸಾಕಷ್ಟು ದುಡಿದು ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.