ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ವಿಶ್ವಮಾನವ ಕುವೆಂಪು ಫೌಂಡೇಶನ್ (ರಿ.) VKF 75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಆಸಕ್ತರು ತಮ್ಮ ಕವಿತೆಗಳನ್ನು ಕಳುಹಿಕೋಡಲು ತಿಳಿಸಿದೆ.
ಈ ಬಗ್ಗೆ ಮಾತನಾಡಿರುವ ವಿಶ್ವಮಾನವ ಕುವೆಂಪು ಫೌಂಡೇಶನ್ (ರಿ.) VKF ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಶ್ವೇತನಾಗರಾಜ್ ಮಾತನಾಡಿ “ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ VKF ಜಿಲ್ಲಾ ಮಟ್ಟದ ಸ್ವರಚಿತ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವೀತಿಯ, ತೃತೀಯ ಬಹುಮಾನ, ಭಾಗವಹಿಸಿದ ಎಲ್ಲಾರಿಗೂ ಪ್ರಶಸ್ತಿ ಪತ್ರ, ನೀಡಿ ಗೌರವಿಸಲಾಗುವುದು” ಎಂದರು.
ಸ್ಪರ್ಧೆಯ ಬಗ್ಗೆ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿರುವ VKF ರಾಜ್ಯ ಅಧ್ಯಕ್ಷ ಲಕ್ಕೂರು ಎಂ ನಾಗರಾಜ್ ” ಕವಿತೆ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದಾಗಿರಬೇಕು, ಒಬ್ಬರು ಒಂದು ಕವನ ಕಳುಹಿಸಬೇಕು, ಪತ್ರಿಕೆಗಳಲ್ಲಿ ಪ್ರಕಟಿತ ಕವನ ಕಳುಹಿಸುವಂತಿಲ್ಲ, ಕನ್ನಡ ಭಾಷೆಗೆ ಮಾತ್ರ ಆದ್ಯತೆ, ತಮ್ಮ ಕವನಗಳನ್ನು ಆಗಸ್ಟ್ 10 ರ ಒಳಗೆ 9900538954, 8277094649 ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿಕೋಡಲು ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.