ಮಂಗಳೂರು ,(ವಿಶ್ವ ಕನ್ನಡಿಗ ನ್ಯೂಸ್ ):ವೈರಲ್ ಆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಡಿಯೋ ಕ್ಲಿಪ್ ಬಗ್ಗೆ ತನಿಖೆ ನಡೆಸಬೇಕೆಂಬ ಬಿಜೆಪಿ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದು, ತನಿಖೆಗೆ ಮನವಿ ಮಾಡಿ ಒಂದು ವಾರ ಆದರೂ ತನಿಖೆಯ ಫಲಿತಾಂಶ ಬಂದಿಲ್ಲ. ಕಾಂಗೇಸ್ ಬಗ್ಗೆ ಅಪ ಪ್ರಚಾರ ಮಾಡುತ್ತಿರುವ ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕಾಗಿದೆ ಎಂದು ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು ಅವರು ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಡಿದರು .ಈ ವೈರಲ್ ಆಡಿಯೋ ವೈರಲ್ ಆಗಲು ಕಾಂಗ್ರೆಸ್ ಕೈವಾಡ ಇದೆ ಎಂದು ಆರೋಪವನ್ನುಬಿಜೆಪಿ ಮಾಡುತ್ತಿದೆ. ಆದುದರಿಂದ ತನಿಖೆ ಆಗಲೇ ಬೇಕಾಗುತ್ತದೆ. ಸಾಮಾನ್ಯವಾಗಿ ದೇಶದಲ್ಲಾಗಲಿ ಬಿಜೆಪಿ ಸರಕಾರಗಳು ಯಾವುದೇ ಆರೋಪಗಳ ತನಿಖೆ ನಡೆಸುವುದಿಲ್ಲ. ಕಳೆದ ಬಾರಿ ಕಾಂಗ್ರೆಸ್ ಸರಕಾರ 7 ಪ್ರಕರಣಗಳನ್ನು ಸಿಬಿಐಗೆ ನೀಡಿತ್ತು. ಇವರು ಒಂದೇ ಒಂದು ಪ್ರಕರಣ ತನಿಖೆಗೆ ನೀಡಿಲ್ಲ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪುರುಷೋತ್ತಮ ಚಿತ್ರಾಪುರ, ಕಾರ್ಪೊರೇಟರ್ ಅಬ್ದುಲ್ ರವೂಫ್, ಮಹಿಳಾ ಕಾಂಗ್ರೆಸ್ ನಾಯಕಿ ಕು.ಅಪ್ಪಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.