ಕಡಂಬಾರು(ವಿಶ್ವಕನ್ನಡಿಗ ನ್ಯೂಸ್): ವಿವಿಧ ಪಕ್ಷಗಳಲ್ಲಿ ಗುರುತಿಸಿ, ಕಾರ್ಯನಿರ್ವಹಿಸಿದ ಹಲವಾರು ಯುವಕರು ತಮ್ಮ ಪಕ್ಷಗಳನ್ನು ತೊರೆದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ಗೆ ಸೇರಿ ಸದಸ್ಯತ್ವ ಪಡೆದ ಘಟನೆ ಮಂಜೇಶ್ವರ ವ್ಯಾಪ್ತಿಯಲ್ಲಿ ನಡೆದಿದೆ.
ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲ ಕಾರ್ಯಧರ್ಶಿ ಮುಬಾರಕ್ ಕಡಂಬಾರ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಸ್ಥಾಯಿ ಸಮಿತಿ ಚೇರ್ಮಾನ್ ಹಮೀದ್ ಹೊಸಂಗಡಿ ಹೊಸದಾಗಿ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಸದಸ್ಯತ್ವ ನೀಡಿದರು.
ಮುಖ್ಯ ಅತಿಥಿಯಾಗಿ ಮೀಂಜ ಪಂಚಾಯತ್ ಸದಸ್ಯರಾದ ರಝಾಕ್ ಗಾಂಧಿನಗರ್, ಎಸ್.ಡಿ.ಪಿ.ಐ ಮಂಜೇಶ್ವರ ಪಂಚಾಯತ್ ಜತೆ ಕಾರ್ಯದರ್ಶಿ ಅಶ್ರಫ್ ಬಡಾಜೆ, ಮೀಂಜ ಪಂಚಾಯತ್ ಉಪಾಧ್ಯಕ್ಷರಾದ ಅಝೀಝ್ ಕಡಂಬಾರ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.