ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಆಸ್ತಿಯ ಮೇಲೆ ತನಿಖೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಸಚಿವರು ಆದಾಯಕ್ಕಿಂತ ಹೆಚ್ಚು ಗಳಿಕೆಯ ಮಾಡಿದ್ದಾರೆ ಅದಕ್ಕೆ ಅವರು ಕಟ್ಟಿಸುತ್ತಿರುವ ಐಷರಾಮಿ ಮನೆಯೇ ಸಾಕ್ಷಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಯನ್ನು ಮಾಡಲಾಗುತ್ತಿದ್ದೂ ,ಇದಕ್ಕೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ . 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದಾರೆ ಎಂಬ ನಿರ್ಮಾಣ ಹಂತದದ ಕಟ್ಟಡವನ್ನು ಸೇರಿಸಿ , ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಅಪಪ್ರಚಾರದ ಬಗ್ಗೆ ಬೇಸರ ಮೂಡಿಸಿರುವ ಕೋಟಾ ಶ್ರೀನಿವಾಸ ಪೂಜಾರಿ ತಮ್ಮ ಮೇಲೆಯೇ ತನಿಖೆ ಮಾಡುವಂತೆ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯವರಿಗೆ ಪತ್ರ ಬರೆದಿದ್ದಾರೆ. ನೇರವಾಗಿ ಲೋಕಾಯುಕ್ತ ನ್ಯಾಯಾಧೀಶರಿಗೆ ನನ್ನ ಆಸ್ತಿ ಮೇಲೆ ತನಿಖೆ ಮಾಡಿ ಎಂದು ಸುದೀರ್ಘ ಮನವಿ ಪತ್ರ ಬರೆಯುವ ಮೂಲಕ ದೂರು ಸಲ್ಲಿಸಿದ್ದು ಅಚ್ಚರಿಸಿಮೂಡಿಸಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.