ಪುತ್ತೂರು,ಆಗಸ್ಟ್ 2: ಪುತ್ತೂರು ನಗರಸಭಾ ವ್ಯಾಪ್ತಿಯ ಮೊಟ್ಟೆತ್ತಡ್ಕದಲ್ಲಿರುವ ಸಂವಿಧಾನ ಶಿಲ್ಪಿ ಡಾ/ ಅಂಬೇಡ್ಕರ್ ಭವನ ಕಟ್ಟಡ ತೀರಾ ದುಃಸ್ಥಿತಿಯಲ್ಲಿದ್ದು, ಕಟ್ಟಡದ ಮೇಲ್ಛಾವಣಿಯ ಹಂಚುಗಳು ಮುರಿದುಬಿದ್ದಿರುತ್ತದೆ ಹಾಗೂ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡು ಗಬ್ಬು ವಾಸನೆಯ ಪರಿಸ್ಥಿತಿ ಎದುರಾಗಿದೆ. ಇದನ್ನು ಮನಗಂಡು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿ ವತಿಯಿಂದ ನಗರ ಸಭಾ ಪೌರಾಯುಕ್ತರಿಗೆ ಮನವಿ ನೀಡಲಾಯಿತು.
ಅಂಬೇಡ್ಕರ್ ಭವನದ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ದುಃಸ್ಥಿತಿಯಲ್ಲಿರುವ ಕಟ್ಟಡವನ್ನು ಶೀಘ್ರದಲ್ಲಿಯೇ ದುರಸ್ಥಿಗೊಳಿಸಿ ಅಂಬೇಡ್ಕರ್ ಭವನವನ್ನು ಪುನಶ್ಚೇತನಗೊಳಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ. ಇಲ್ಲವಾದಲ್ಲಿ ಎಸ್.ಡಿ.ಪಿ.ಐ ವತಿಯಿಂದ ಮೊಟ್ಟೆತ್ತಡ್ಕ ಅಂಬೇಡ್ಕರ್ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪುತ್ತೂರು ನಗರ ಸಮಿತಿ ಅದ್ಯಕ್ಷರಾದ ಯಹ್ಯಾ KH, ಕೂರ್ನಡ್ಕ ವಾರ್ಡಿನ ಕಾರ್ಯದರ್ಶಿ ಹಾರಿಸ್ ಫಠಾನ್, ಮೊಟ್ಟೆತ್ತಡ್ಕ ಬೂತ್ ಅಧ್ಯಕ್ಷರಾದ ನಝೀರ್ ಮೊಟ್ಟೆತ್ತಡ್ಕ, ಕೋಶಾಧಿಕಾರಿ ಬದ್ರುದ್ದೀನ್, ಹಾಗೂ ಆಸಿಫ್ ಲೆಫ್ಟಿ ಹಾಜರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.