ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ರಾಷ್ಟ್ರಮಟ್ಟದಲ್ಲಿ 2020ನೇ ಸಾಲಿನಲ್ಲಿ ರಾಜ್ಯ ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಹಾಗೂ ಕೇಂದ್ರ ಸರ್ಕಾರದಿಂದ ಅಂಗೀಕೃತವಾದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಅಥವಾ ಪದಕ ವಿಜೇತ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯ ದೂ. ಸಂಖ್ಯೆ:0824-2451264ಕ್ಕೆ ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.