ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) :- ಅಂತರ್ಜಲ ೧೨೦೦ ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ ೨ ನೇ ಹಂತದ ಯೋಜನೆ ಅನುಷ್ಠಾನಕ್ಕೆ ಅಗತ್ವಾದ ೫೦೦ ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಷೇಕಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು.
ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎ.ಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ೧೨೦೦ ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ವರಕವಾಗಿದೆ ಎಂದು ತಿಳಿಸಿದರು.
ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು . ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು.
ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , ೨ ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ.ಭಗವಂತ್ ಕೂಬಾ ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.