ಕೋಲಾರ(ವಿಶ್ವ ಕನ್ನಡಿಗ ನ್ಯೂಸ್ ):- ತಂಬಾಕು ಉತ್ಪನ್ನಗಳ ಸೇವನೆಯಿಂದ ಮನುಷ್ಯನ ದೇಹದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಜಿಲ್ಲಾಧಿಕಾರಿಗಳಾದ ಡಾ | ಆರ್.ಸೆಲ್ವಮಣಿ ಅವರು ತಿಳಿಸಿದರು.
ಎಂದು ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ , COTPA – 2003 ಕಾಯ್ದೆಯ ಉನ್ನತ ಅನುಷ್ಠಾನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯನ್ನು ತ್ಯಜಿಸಿದ್ದು , ಕೆಲವರು ಪುನಃ ತಂಬಾಕು ಉತ್ಪನ್ನಗಳ ಸೇವೆಗೆ ಒಳಗಾಗಿರುತ್ತಾರೆ. ಇಂತಹವರನ್ನು ಗುರಿತಿಸಿ ಶಾಶ್ವತವಾಗಿ ತಂಬಾಕು ಉತ್ಪನ್ನಗಳ ಸೇವನೆಯನ್ನು ತ್ಯಜಿಸುವಂತೆ ಮಾಡಬೇಕು , ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮನೆ ಮನೆಗೆ ತೆರಳಿ ಅರಿವು ಮೂಡಿಸಿ ಎಂದರು.
ಕಾಲೇಜು ಹಂತಗಳಲ್ಲಿ ಹೆಚ್ಚಿನ ಯುವ ಜನತೆ ತಂಬಾಕು ಉತ್ಪನ್ನಗಳ ಸೇವನೆಗೆ ಒಳಗಾಗುತ್ತಾರೆ . ಈ ಹಂತಗಳಲ್ಲಿ ಬೀಡಿ , ಸಿಗರೇಟ್ ಸೇವನೆಯನ್ನು ಫ್ಯಾಷನ್ ಆಗಿ ತೆಗೆದುಕೊಂಡು ದುಶ್ಚಟಗಳಿಗೆ ಬಲಿಯಾಗುತ್ತಾರೆ . ಹೊಸ ರೀತಿಯ ಜಾಹೀರಾತುಗಳಿಂದ ಆಕರ್ಶಿತರಾಗಿ ತಂಬಾಕು ಸೇವನೆ ಮಾಡುತ್ತಾರೆ . ಆದ್ದರಿಂದ ಈ ಹಂತದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿ ಅರಿವು ಮೂಡಿಸಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ರಾಜ್ಯ ತಂಬಾಕು ನಿಯಂತ್ರಣ ಘಟಕದ ಸಮನ್ವಯಾಧಿಕಾರಿಗಳಾದ ಪ್ರಭಾಕರ್ ಅವರು ಮಾತನಾಡಿ , ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ತಂಬಾಕು ಸೇವನೆ ನಿಷೇಧ , ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರು 18 ವರ್ಷದೊಳಗಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ.
ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ 19 ವರ್ಷದಲ್ಲಿಯೇ ಹೆಚ್ಚಿನ ಯುವ ಜನತೆ ತಂಬಾಕು ಉತ್ಪನ್ನಗಳ ಸೇವನೆಗೆ ಒಳಗಾಗುತ್ತಾರೆ. 30 ವರ್ಷದ ನಂತರ ತಂಬಾಕು ಉತ್ಪನ್ನ ಸೇವನೆಗಳಿಗೆ ಒಳಗಾಗುವರು ತುಂಬಾ ಕಡಿಮೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜನರು ಬೀಡಿ ಸೇವನೆ ಮಾಡುತ್ತಿದ್ದು , ಸಿಗರೇಟ್ ಸೇವನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಜಗದೀಶ್ , ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಚಂದನ್ , ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳಾದ ಡಾ | ಮಹಮ್ಮದ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.