ಕೊಡಗು(ವಿಶ್ವಕನ್ನಡಿಗ ನ್ಯೂಸ್): 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಘಟಕಗಳಲ್ಲಿ ಆಝಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸಮಿತಿಯ ಹೊರಡಿಸಿದ ಸುತ್ತೋಲೆಯಂತೆ ವಿವಿಧ ಕಾರ್ಯಕ್ರಮಗಳನ್ನೊಳಗೊಂಡ “ಆಝಾದೀ ಸಪ್ತಾಹ”ವು ರಾಜ್ಯದ ವಿವಿಧೆಡೆಗಳಲ್ಲಿ ನಡೆಸಲ್ಪಡುತ್ತಿದ್ದು.ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ 14-08-2021ರಂದು ರಾತ್ರಿ 8 ಗಂಟೆಗೆ ಸರಿಯಾಗಿ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆಯವರ ಸ್ವಾತಂತ್ರ್ಯ ದಿನ ಸಂದೇಶ ಭಾಷಣ ಜಿಲ್ಲೆಯ ಅಧಿಕೃತ ಯುಟ್ಯೂಬ್ ಚಾನೆಲ್ನಲ್ಲಿ ನೇರ ಪ್ರಸಾರ ಮಾಡಲಾಯಿತು. ಡಿವಿಷನ್ ಮಟ್ಟದಲ್ಲಿ ಆಝಾದಿ ಸೆಮಿನಾರುಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳ ವಿಚಾರಗಳನ್ನೊಳಗೊಂಡ ಕಾರ್ಯಕ್ರಮ ನಡೆಸಲಾಗಿದೆ.
ಅದೇ ರೀತಿ ಜಿಲ್ಲೆಯ ಸುಮಾರು 90ರಷ್ಟು ಶಾಖೆಗಳಲ್ಲಿ ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನ ಎಸ್ಎಸ್ಎಫ್ನ ಕಾರ್ಯಕರ್ತರು ನಡೆಸಲಿದ್ದಾರೆ.
ಪ್ರತಿವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೃಹತ್ ಆಝಾದಿ ರಾಲಿಯನ್ನು ಹಮ್ಮಿಕೊಳ್ಳುತ್ತಿದ್ದರೂ ಕಳೆದೆರಡು ವರ್ಷಗಳಿಂದ ಲಾಕ್ಡೌನ್ ನಿಂದ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.