ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ಪಟ್ಟಣ್ಣದ ಆರ್.ಜಿ ಪೆಟ್ರೋಲ್ ಬಂಕ್ ಹತ್ತಿರ, ಜೆ.ಡಿ.ಎಸ್ ಕಚೇರಿ ಆವರಣದಲ್ಲಿ ಜಾತ್ಯಾತೀತ ಜನತಾದಳ (ಜೆ.ಡಿ.ಎಸ್) ಹಾಗೂ ವಿಶ್ವಮಾನವ ಕುವೆಂಪು ಫೌಂಡೇಶನ್ (ರಿ.) VKF ವತಿಯಿಂದ 75 ನೇ ಸ್ವಾಂತಂತ್ರ್ಯ ದಿನಾಚರಣೆಯ ಪ್ರಯುಕ್ತ “ಬೃಹತ್ ರಕ್ತದಾನ ಶಿಬಿರ” ವನ್ನು ಆಯೋಜಿಸಲಾಗಿತ್ತು.
ಬೃಹತ್ ರಕ್ತದಾನ ಶಿಬಿರವನ್ನು ಸಮಾಜ ಸೇವಕರು ಹಾಗೂ ಜೆ.ಡಿ.ಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ರವರು ಮಹಾತ್ಮಗಾಂಧಿಜೀ ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಉದ್ಘಾಟನೆ ಮಾಡಿ ಮಾತನಾಡುತ್ತಾ “ಎಲ್ಲ ದಾನಗಳಲ್ಲೇ ರಕ್ತದಾನ ಶ್ರೇಷ್ಠ ದಾನ. ರಕ್ತವನ್ನು ದಾನ ಮಾಡುವುದು ಒಳ್ಳೆಯ ಕಾರ್ಯ, ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ,ಮನುಷ್ಯನಿಗೆ ಮನುಷ್ಯನ ರಕ್ತವನ್ನೇ ನೀಡಬೇಕು. ಆದರೆ, ಅನೇಕರಿಗೆ ರಕ್ತದಾನ ಮಾಡಲು ಆಸಕ್ತಿ ಇಲ್ಲ. ಲಕ್ಷಾಂತರ ಮಂದಿ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸಬೇಕು, ಆ ಹಾದಿಯಲ್ಲಿ ಇಂದು VKF ರಾಜ್ಯವ್ಯಾಪಿ ರಕ್ತ ನೀಡಿ ಜೀವ ಉಳಿಸುತ್ತಿರುವ ಕಾರ್ಯ ಮಾಡುತ್ತಿರುವ ಉತ್ತಮ ಕಾರ್ಯಕ್ಕೆ ನಾವು ಸದಾ ನಿಲ್ಲುವೆವು, ತಾಲ್ಲೂಕಿನ ಜನರ ಜೀವ ಉಳಿಸುವ ಕಾರ್ಯಕ್ಕೆ ಆಸರೆಯಾಗಿರುವ VKF ಗೆ” ಶುಭಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆ.ಡಿ.ಎಸ್ ರಾಜ್ಯ ಮುಖಂಡ ಬಲ್ಲಹಳ್ಳಿ ನಾರಾಯಣಸ್ವಾಮಿ ಮಾತನಾಡಿ “ರಕ್ತಕ್ಕೆ ಪರ್ಯಾಯ ಇಲ್ಲ. ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವೇ ನೀಡಬೇಕು. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ರೂಢಿಸಿಕೊಳ್ಳಬೇಕು, ಒಂದು ಯೂನಿಟ್ ರಕ್ತದಿಂದ ಮೂರು ಜನರ ಪ್ರಾಣ ಉಳಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಉತ್ಸಾಹದಿಂದ ರಕ್ತದಾನ ಮಾಡಲು ಮುಂದೆ ಬರಬೇಕು. ಇದರಿಂದ ಪ್ರಾಣ ಹಾನಿಯನ್ನು ಕಡಿಮೆ ಮಾಡಬಹುದು. ರಕ್ತದಾನ ಇತರರಿಗೆ ಮರುಜನ್ಮನೀಡುವ ಶ್ರೇಷ್ಠ ಮತ್ತು ಸಾರ್ಥಕ ಸೇವೆಯಾಗಿದೆ’ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಮಸ್ವಾಮಿ ರೆಡ್ಡಿ ರವರು ಮಾತನಾಡಿ “ರಕ್ತಹೀನತೆ, ತಲಸೀಮಿಯಾ ಮುಂತಾದ ಆರೋಗ್ಯ ಸಮಸ್ಯೆಯಿಂದ ಬಳಲುವವರಿಗೂ ರಕ್ತದ ಅವಶ್ಯಕತೆ ಇದೆ. ಜೊತೆಗೆ ಬಿಳಿ ರಕ್ತದ ಕಣದ ಬೇಡಿಕೆಯೂ ಹೆಚ್ಚಾಗುತ್ತಿದೆ. ಸದ್ಯ ಕೆಲ ಕೋವಿಡ್ ರೋಗಿಗಳಿಗೂ ರಕ್ತದ ಅವಶ್ಯಕತೆ ಉಂಟಾಗಿರುವ ಕಾರಣ ರಕ್ತದ ಕೊರತೆ ನಿಗಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡುತ್ತಿರುವ ನಮ್ಮ ಪಕ್ಷದ ಮುಖಂಡರಿಗೆ, VKF ಗೆ ಅಭಿನಂದನೆ” ಅರ್ಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜ್ಯಾತ್ಯಾತೀತ ಜನತಾದಳ (ಜೆ.ಡಿ.ಎಸ್) ಪಕ್ಷದ ತಾಲ್ಲೂಕು ಅಧ್ಯಕ್ಷರಾದ ಚಂದ್ರೇಗೌಡ ರವರು ಮಾತನಾಡುತ್ತಾ “ಇತ್ತೀಚಿನ ದಿನಗಳಲ್ಲಿ ಸಕಾಲದಲ್ಲಿ ರಕ್ತ ಲಭ್ಯವಾಗದೆ ಹಲವು ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ವಾರ್ಷಿಕ 11.5 ಲಕ್ಷ ಯುನಿಟ್ಗಳಷ್ಟು ರಕ್ತದ ಕೊರತೆ ಇದೆ. ಕೋವಿಡ್ ಬಂದ ನಂತರ ರಕ್ತ ಸಂಗ್ರಹಣೆ ಮತ್ತಷ್ಟು ಕುಸಿದಿರುವ ಈ ಸಂಕಷ್ಟದಲ್ಲಿ ಜೆಡಿಎಸ್ ಪಕ್ಷ ಜಿ.ಇ.ರಾಮೇಗೌಡರವರ ನಾಯಕತ್ವದಲ್ಲಿ, ಸ್ವಾತಂತ್ರ್ಯ ದಿನದಲ್ಲಿ ಮಹತ್ತರ ಕಾರ್ಯ ಮಾಡುತ್ತಿರುವುದು ಬಹಳ ಹೆಮ್ಮೆ” ಎಂದರು.
ರಕ್ತದಾನ ಶಿಬಿರದಲ್ಲಿ ಎಲ್ಲಾ ರೀತಿಯ ಕೋವಿಡ್ ನಿಯಾಮವಾಳಿಗಳಿಗಳನ್ನು ಅನುಸರಿಸಿ, ರಕ್ತದಾನಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 182 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಬೃಹತ್ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಜೆ.ಡಿ.ಎಸ್ ಪ್ರಧಾನ ಕಾರ್ಯದರ್ಶಿ ದೊಮ್ಮಲೂರು ವಿ.ದೇವರಾಜ್, ಪುರಸಭಾ ಸದಸ್ಯರಾದ ಪವಿತ್ರಾ ರಾಘವೇಂದ್ರ, ವಿ.ಕೆ.ಎಫ್ ರಾಜ್ಯ ಅಧ್ಯಕ್ಷ ಲಕ್ಕೂರು ಎಂ.ನಾಗರಾಜ್, ವಕೀಲರಾದ ಆನಂದ್ ಕುಮಾರ್,ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀನಾಥ್, ಪುರಸಭಾ ಸದಸ್ಯರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪರಮೇಶ್, ಪ್ರಧಾನ ಕಾರ್ಯದರ್ಶಿ ದೊಡ್ಡಶಿವಾರ ವರದರಾಜ್, ಮುಖಂಡರಾದ ಮಾಲೂರು ನಟರಾಜ್, ಜೊನ್ನಪ್ಪ, ಜೆಡಿಎಸ್ ಯುವ ಮುಖಂಡರಾದ ಸಂದೀಪ್, ಸಂಜು,ಅರುಣ್, ಲಿಂಗಾಪುರ ಪ್ರೇಮ್, ಶ್ಯಾಮೇಗೌಡ, ಆನಂದ್, ಹಾಗೂ ಜೆ.ಡಿ.ಎಸ್ ಎಲ್ಲಾ ಮುಖಂಡರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.