ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಬಿಜೆಪಿ ಯುವ ಮೋರ್ಚಾ ವತಿಯಿಂದ ಮಾಲೂರು ಮಂಡಲದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ವೇಣುಗೋಪಾಲಗೌಡ ನೇತೃತ್ವದಲ್ಲಿ ಧ್ವಜಾರೋಹಣ ಮಾಡಿ , ರಾಷ್ಟ್ರಗೀತೆ ಹಾಡಿದ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಮುಖ್ಯರಸ್ತೆಯಲ್ಲಿ , ಯುವ ಮೋರ್ಚಾದ ತರುಣರು ದೇಶಕ್ಕಾಗಿ ಸಂಕಲ್ಪ ಮಾಡಿ ಸೈಕಲ್ ಜಾಥ ಮಾಡಿದೆವು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕೋಶಾಧ್ಯಕ್ಷರಾದ ಅನಿಲ್ ಶೆಟ್ಟಿ, ತಾಲೂಕು ಬಿಜೆಪಿ ಅಧ್ಯಕ್ಷರಾದ ಪುರ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿಗಳು ವೆಂಕಟೇಶ್ ಕುಮಾರ್, ಅಂಬರೀಶ್ ರೆಡ್ಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಬಾಲಾಜಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೇಜಸ್, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕರಾದ ಡಾಕ್ಟರ್ ವಿನಾಯಕ ಪ್ರಭು, ಡಾಕ್ಟರ್ ಲಿಕಿತೇಶ್, OBC ಅಧ್ಯಕ್ಷರು ಮುರಳಿ , ತಾಲೂಕ್ ಉಪಾಧ್ಯಕ್ಷರು ನಾಗರಾಜು, ಖಜಾಂಚಿ ಗೋಪಾಲ, ಪುರಸಭೆ ಸದಸ್ಯರು ಸುಮಿತ್ರ ರಾಮೂರ್ತಿ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಯುವ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.