(www.vknews.com) : ಸಜೀಪನಡು ಗ್ರಾಮ ಪಂಚಾಯತ್ ಆವರಣದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ಮಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ.ಫೌಝಿಯ ಬಾನು ಅವರು ಸಭಿಕರನ್ನುದ್ದೇಶಿಸಿ ಹಿತನುಡಿಗಳನ್ನಾಡಿದರು. ಪಂಚಾಯತ್ ಉಪಾಧ್ಯಕ್ಷರು ಶ್ರೀ .ಅಬ್ದುಲ್ ರಹಿಮಾನ್ ಮತ್ತು ಮಾಜಿ ಅಧ್ಯಕ್ಷರು ಶ್ರೀ.ನಾಸಿರ್ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ S.S.L.C ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಇಬ್ಬರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಪ್ರಯುಕ್ತ ಸಜಿಪನಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ಗಿಡಗಳನ್ನು ನೆಡಲು ಯೋಜನೆ ಹಾಕಿರುವುದರಿಂದ ಇವತ್ತು 2 ಗಿಡ ನೆಡುವುದರ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.