ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಖಿದ್ಮಾ ಫೌಂಡೇಶನ್ ಕರ್ನಾಟಕ 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದಿನಾಂಕ 14/08/2021 ಹಾಗೂ 15/08/2021 ನೇ ಶನಿವಾರ ಮತ್ತು ಭಾನುವಾರದಂದು ಆಯೋಜಿಸಲಾಗಿದ್ದ ದೇಶ ಭಕ್ತಿ ಗೀತೆ ಅಂತರ್ಜಾಲ ನೇರ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ (ರಿ) ರಾಜ್ಯಾಧ್ಯಕ್ಷರಾದ ಎಸ್.ನಂಜುಂಡ ಪ್ರಸಾದ್ ವಿಧ್ಯಾಭ್ಯಾಸವು ದೇಶದ ದೊಡ್ಡ ಆಸ್ತಿಯಾಗಿದೆ. ಅದನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಈ ಆಸ್ತಿಯನ್ನು ಕಾಪಾಡುವುದು ವಿಧ್ಯಾವಂತರಾಗುವ ಮೂಲಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಎರಡು ದಿನಗಳಲ್ಲಿ ಸುಮಾರು 9 ಘಂಟೆಗಳ ಅವಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್ ಸೇರಿದಂತೆ ವಿವಿಧ ಕಡೆ ಇರುವ ಸುಮಾರು 160 ಮೀರಿದ ಕನ್ನಡಿಗರು ದೇಶಭಕ್ತಿ ಗೀತೆಗಳನ್ನು ಹಾಡಿದರು.
ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ಖಿದ್ಮಾ ಫೌಂಡೇಶನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಇವರ ವೀಕ್ಷಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ: ಏಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ: ನಂದಿ ಬಾಷ,ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್, ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಕಾರ್ಯಾಧ್ಯಕ್ಷ ಡಾ ||ಶಿವರಾಜ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಕುಮಾರಿ ತನೀಕ್ಷಾ ಅಶೋಕ್ ಪ್ರಸಾದ್ ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಆಝಾದಿ ಖಿದ್ಮಾ ಗಾಯನ ಪುರಸ್ಕಾರ ನೀಡಲಾಯಿತು ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.