ಮಂಗಳೂರು(www.vknews.in): ಅಡ್ಡೂರಿನಲ್ಲಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಪೋರಂ ವತಿಯಿಂದ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು KMC ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಅಡ್ಡೂರು ಬದ್ರಿಯಾ ಮದ್ರಸದಲ್ಲಿ ನಡೆಸಲಾಯಿತು. ಬದ್ರಿಯಾ ಜುಮ್ಮಾ ಮಸೀದಿಯ ಗೌರವಾನ್ವಿತ ಖತೀಬರಾದ ಸದಕುತುಲ್ಲಾ ಫೈಝಿಯವರು ದುಆದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಾಪ್ಯುಲರ್ ಫ್ರಂಟ್ ಡಿವಿಷನ್ ಅಧ್ಯಕ್ಷರಾದ A.G.ಅಶ್ರಫ್ ರವರು ಸಂದೇಶ ಭಾಷಣ ಮಾಡಿದರು. K.M.C ಆಸ್ಪತ್ರೆಯ ವೈದ್ಯಾಧಿಕಾರಿಯಾದ Dr. ಪ್ರಜ್ವಲ್ ರವರು ರಕ್ತದಾನದ ಮಹತ್ವ ಮತ್ತು ಅವಶ್ಯಕತೆಯನ್ನ ಸಂಕ್ಷಿಪ್ತವಾಗಿ ವಿವರಿಸಿದರು. ಕಳೆದ 20 ವರ್ಷಗಳಿಂದ ಪಾಪ್ಯುಲರ್ ಫ್ರಂಟ್ ಸಂಘಟನೆಯವರು ನಮಗೆ ರಕ್ತ ಕೊಟ್ಟು ಸಹಕರಿಸುತ್ತಾ ಬಂದಿದ್ದಾರೆ ಯಾವಾಗ ಯಾವುದೇ ಬ್ಲಡ್ ಗ್ರೂಪಿನ ರಕ್ತ ಬೇಕಾದರೂ ನಮಗೆ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ ಎಂದು ಮೆಚ್ಚುಗೆಯ ಮಾತನ್ನಾಡಿದರು. ಯಶಸ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಪೋರಂ ಇದರ ಅಧ್ಯಕ್ಷರಾದ ಜನಾಬ್ ಕಾಸಿಂ ಪ್ಯಾರ ವಹಿಸಿದ್ದರು. ಪಾಪ್ಯುಲರ್ ಫ್ರಂಟ್ ಅಡ್ಡೂರು ವಲಯ ಕಾರ್ಯದರ್ಶಿ ಶರೀಫ್ ಗೋಳಿಪಡ್ಪು ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 170 ರಕ್ತದಾನಿಗಳು ಆಗಮಿಸಿದ್ದು 140 ಯುನಿಟ್ ರಕ್ತದಾನವನ್ನ ಪಡೆಯಲಾಯಿತು. ಈ ಕಾರ್ಯಕ್ರಮಕ್ಕೆ ಅಲ್ ಮದ್ರಸತುಲ್ ಬದ್ರಿಯಾ ಸಭಾಂಗಣದಲ್ಲಿ ಸ್ಥಳಾವಕಾಶ ನೀಡಿದ ಬದ್ರಿಯಾ ಜಮಾತ್ ಕಮಿಟಿಗೆ ಅಭಿನಂದನೆಗಳು ಸಲ್ಲಿಸುತ್ತಿದ್ದೇವೆ. ಅದೇ ರೀತಿ ಈ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಕಾರ್ಯಕರ್ತರಿಗೆ ಹಾಗೂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ನಾಗರಿಕರಿಗೂ ವಿವಿಧ ಸಂಘಟನೆಗಳ ನಾಯಕರಿಗೂ, ಪದಾಧಿಕಾರಿಗಳಿಗೂ ಹಾಗೂ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಮಹಿಳಾಮಣಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ನಮ್ಮ ಎಲ್ಲಾ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನೆರವೇರಿಸಲು ಅನುಗ್ರಹಿಸಿದ ಸ್ರಷ್ಠಿಕರ್ತನಾದ ಅಲ್ಲಾಹನಿಗೆ ಸರ್ವ ಸ್ತುತಿಗಳು.
ಅಧ್ಯಕ್ಷರು ಹಾಗೂ *ಸದಸ್ಯರು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಅಡ್ಡೂರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.