ಬೆಳ್ತಂಗಡಿ (www.vknews.com) : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನವು ರಾಜ್ಯಾದ್ಯಂತ ” ಒಗ್ಗಟ್ಟಿನಲ್ಲಿ ಬಲವರ್ಧನೆ , ಭಿನ್ನ ಧ್ವನಿಯ ರಕ್ಷಣೆ” ಎಂಬ ಘೋಷಾ ವಾಕ್ಯದಡಿ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಬೆಳ್ತಂಗಡಿ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಯಿತು.
ವಿದ್ಯಾರ್ಥಿ ಸಂಘಟನೆಯ ಉದ್ದೇಶ ಮತ್ತು ಪ್ರತಿಯೊಬ್ಬ ಕಾರ್ಯಕರ್ತನ ಹೊಣೆಗಾರಿಕೆಯ ಬಗ್ಗೆ ಜಿಲ್ಲಾಧ್ಯಕ್ಷರಾದ ಯಾಸೀನ್ ಬಂಗೇರಕಟ್ಟೆ ವಿವರಿಸಿದರು. ನಂತರ ಸದಸ್ಯತ್ವ ಕೂಪನ್ ವಿದ್ಯಾರ್ಥಿಗಳಿಗೆ ನೀಡುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು,ಕೋಶಾಧಿಕಾರಿ ಝಹೀದ್ ಸುನ್ನತ್ಕೆರೆ, ಜಿಲ್ಲಾ ನಾಯಕರಾದ ಸಹಝಾದ್ ಸುನ್ನತ್ಕೆರೆ, ಅನ್ಸಾಫ್, ಕೈಸ್ ಕಣಿಯೂರು ಹಾಗೂ ಯೂನಿಟ್ ನಾಯಕರು ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.