ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಸಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರಕ ಶ್ರೀ ಸುರೇಶ ಆಗಮಿಸಿದರು. ನಂತರ ಮಾತನಾಡಿದ ಅವರು ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ಸಮಾಜ ಸುಧಾರಕರ ತ್ಯಾಗ, ಬಲಿದಾನವನ್ನು ನಾವು ನೆನಪಿಸಿಕೊಳ್ಳಬೇಕು ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಹೇಳಿದರು. ರಕ್ಷಾ ಬಂಧನವನ್ನು ಆಚರಿಸುವುದರಿಂದ ನಮ್ಮ ಸಂಸ್ಕøತಿಯು ಪುನರಾವರ್ತನೆಯಾಗುತ್ತದೆ. ಇದು ಮುಂದಿನ ಪೀಳಿಗೆಗೆ ವಿಶ್ವಾಸಾರ್ಹತೆಯನ್ನು ಹುಟ್ಟುಹಾಕುತ್ತದೆ. ರಕ್ಷಾಬಂಧನವು ನೈತಿಕ, ಸಾಂಸ್ಕøತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಹೊಂದಿರುತ್ತದೆ. ಈ ಹಬ್ಬದ ಆಚರಣೆಯಿಂದ ಮೌಲ್ಯಗಳು ಮತ್ತು ಭಾವನೆಗಳನ್ನು ಇಡೀ ಮಾನವ ಜನಾಂಗ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯ ಭಾವನೆಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತದೆ. “ಒಂದು ಸಸಿ ಅಥವಾ ಒಂದು ಹನಿ ನೀರನ್ನು ಕೂಡಾ ನಾವು ಜವಾಬ್ದಾರಿಯುತವಾಗಿ ನೋಡಿಕೊಳ್ಳಬೇಕು. ಮಾಲಿನ್ಯ ಮುಕ್ತ, ಮಾದಕದ್ರವ್ಯ ಮುಕ್ತ ಸಾಮಾಜಿಕ ಜಾಗೃತಿಯ ವಾತಾವರಣದಲ್ಲಿ ರಾಷ್ಟೀಯ ಸಮಗ್ರತೆಗೆ ಕಾರಣವಾಗುವ ಸಹೋದರತ್ವದ ಭಾವನೆಗಳೊಂದಿಗೆ ಬದುಕುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಬಸವೇಶ್ ಮಾತನಾಡಿ “ರಕ್ಷಾ ಬಂಧನವು ಪ್ರೀತಿ, ಕಾಳಜಿ ಮತ್ತು ಗೌರವವನ್ನು ಹೆಚ್ಚಿಸುತ್ತದೆ. ಆದರೆ ವಿಶಾಲ ದೃಷ್ಟಿಕೋನದಲ್ಲಿ ರಕ್ಷಾ ಬಂಧನವು ಸಾರ್ವತ್ರಿಕ ಸಹೋದರತ್ವ ಮತ್ತು ಸಹೋದರಿಯರ ಅಂತರ್ಗತ ಸಂದೇಶವನ್ನು ನೀಡುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸಲ್ಪಡುವ ರಾಖಿ ಹಬ್ಬವು ಸಾಮಾಜಿಕ ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಸಂದೇಶವನ್ನು ನೀಡುತ್ತದೆ. ಇದು ಸಕಾರಾತ್ಮಕ ಗುಣಗಳ ಪೋಷಣೆ, ಚಿಂತನೆಯಲ್ಲಿ ಶುದ್ಧತೆ, ಮಾತು ಮತ್ತು ಕಾರ್ಯದ ಅಗತ್ಯತೆಯನ್ನು ಒತ್ತಿ ಹೇಳುತ್ತದೆ.
ಶಕ್ತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ. ನಾೈಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಆಚರಣೆಗಳು ಪ್ರೀತಿಯ ಬಂಧವನ್ನು ಬಲಪಡಿಸುವುದಲ್ಲದೆ, ಕುಟುಂಬದ ಗಡಿಗಳನ್ನು ಮೀರಿದೆ. ಇದು ಒಬ್ಬರ ಸ್ವಂತ ಕುಟುಂಬದ ವ್ಯಾಪ್ತಿಯನ್ನು ಮೀರಿ ಇಡೀ ಜಗತ್ತು ಒಂದು ಕುಟುಂಬವಾಗಿ ವಿಸ್ತರಿಸಲು ಸಹಾಯ ಮಾಡುತ್ತದೆ. ಕಾರ್ಯಕ್ರಮದಲ್ಲಿ ಸಹದ್ಯೋಗಿಗಳು ಪರಸ್ಪರ ರಾಖಿ ಕಟ್ಟಿ ರಕ್ಷಾಬಂಧನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಟ್ರಸ್ಟಿ, ಶಕ್ತಿ ವಿದ್ಯಾ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪ ಪೂ ಕಾಲೇಜು ಪ್ರಾಂಶುಪಾಲರಾದ ಪ್ರೋ.ಟಿ.ರಾಜರಾಮ್ ರಾವ್, ಶಕ್ತಿ ರೆಸಿಡೆನ್ಸಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ. ಜಿ. ಕಾಮತ್ ಉಪಸ್ಥಿತರಿದ್ದರು.
ಪ್ರಧಾನ ಸಲಹೆಗಾರ ರಮೇಶ್.ಕೆ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ಶಿಕ್ಷಕಿ ಪ್ರೇಮಲತಾ.ಪಿ ರಕ್ಷಾ ಬಂಧನ ಸಂದೇಶ ವಾಚಿಸಿದರು. ಕನ್ನಡ ಶಿಕ್ಷಕಿ ರೇಖಾ ಡಿಕೋಸ್ತಾ ವಂದಿಸಿದರು. ಕನ್ನಡ ಶಿಕ್ಷಕ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.