ಕಲ್ಲಡ್ಕ (ವಿಶ್ವಕನ್ನಡಿಗ ನ್ಯೂಸ್):ದಿನಾಂಕ 25-08-2021ರಂದು ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಪಿಯುಸಿಯ ನಂತರ ಮುಂದೇನು? ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಣತಜ್ಞರಾದ ರಫೀಕ್ ಮಾಸ್ಟರ್, ಮುಂದಿನ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡಿದರು.ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿಯಾದ ಶ್ರೀಯುತ ಹೈದರ್ ಆಲಿರವರು ಮುಖ್ಯ ಅತಿಥಿಯನ್ನು ಪರಿಚಯಿಸಿದರು.ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗೀತಾ ಜಿ. ಭಟ್ ಪ್ರಾಸ್ತಾವಿಕ ಭಾಷಣವನ್ನಾಡಿದರು ಹಾಗೂ ಕಾಲೇಜಿನ ಸಂಚಾಲಕರಾದ ಶ್ರೀಯುತ ಅಮಾನುಲ್ಲಾ ಖಾನ್ರವರು ಹಿತನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಯಾಸೀನ್ ಬೇಗ್ ರವರು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ವಿದ್ಯೆಯನ್ನು ಮೊಟಕುಗೊಳಿಸಬಾರದು ಎಂದು ತಿಳಿಸಿದರು.ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಯುತ ಇಮಾರತ್ ಅಲಿ, ಕಾರ್ಯದರ್ಶಿಯಾದ ಶ್ರೀಯುತ ಶಾಹುಲ್ ಹಮೀದ್, ಜೊತೆ ಕಾರ್ಯದರ್ಶಿಯಾದ ಸುಲೈಮಾನ್ ಅಪೋಲೋ, ಸದಸ್ಯರಾದ ಹಮೀದ್ ಬಂಟ್ವಾಳ್ರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.ಮೌಲ್ಯಶಿಕ್ಷಣ ವಿಭಾಗದ ಉಪನ್ಯಾಸಕಿ ಶ್ರೀಮತಿ ಸಲೀಮರವರು ಕಿರಾತ್ ಪಠಿಸಿದರು. ಕಾಲೇಜಿನ ವಾಣಜ್ಯ ವಿಭಾಗದ ಉಪನ್ಯಾಸಕಿ ಕು.ಸಫೀನಾ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಉಪಪ್ರಾಂಶುಪಾಲೆಯಾದ ಮಮಿತಾ ಎಸ್ ರೈರವರು ವಂದಿಸಿ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಬಬಿತಾ ಪ್ರಿಯಾ ಲಸ್ರಾದೋರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.