ಕೋಲಾರ (ವಿಶ್ವಕನ್ನಡಿಗ ನ್ಯೂಸ್) : ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಉಚಿತ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಸರಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದ್ದು ಸಾರ್ವಜನಿಕರು ಇಂತಹ ಆರೋಗ್ಯ ಕೇಂದ್ರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಮಾಜಿ ಸ್ವೀಕರ್ ಹಾಗೂ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ್ ಕುಮಾರ್ ತಿಳಿಸಿದರು
ತಾಲ್ಲೂಕಿನ ಮುದುವಾಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಆರೋಗ್ಯ ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸುಸಜ್ಜಿತವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯಸೇವೆ ಒದಗಿಸಿದರೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಜನ ಆರೋಗ್ಯ ದೃಷ್ಟಿಯಿಂದ ಅಲೆದಾಡುವುದು ತಪ್ಪುತ್ತದೆ ಎಂದರು
ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗವು ಗ್ರಾಮಾಂತರ, ಪಟ್ಟಣ, ನಗರ ಪ್ರದೇಶಗಳನ್ನು ತಲ್ಲಣಗೊಳಿಸಿತ್ತು ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮುದಾಯ ಆಧಾರಿತ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಕೊರೊನಾ ರೋಗವನ್ನು ಹೋಗಲಾಡಿಸಬೇಕು ಜೊತೆಗೆ ಉತ್ತಮ ಆರೋಗ್ಯ ಹಾಗೂ ಸಮಾಜವನ್ನು ನಿರ್ಮಾಣ ಕಾರ್ಯದಲ್ಲಿ ನಾವು ಎಲ್ಲರೂ ಕೈ ಜೋಡಿಸಬೇಕಾಗಿದೆ ಎಂದರು. ಸ್ಥಳೀಯ ಮುಖಂಡ ಮುದುವಾಡಿ ವೇಣು ಪತ್ರಕರ್ತರೊಂದಿಗೆ ಮಾತನಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುದುವಾಡಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಸಂಸದ ಎಸ್ ಮುನಿಸ್ವಾಮಿ ಸೇರಿದಂತ ಸರಕಾರದ ಪ್ರೋಟೋ ಕಾಲ್ ನಿಯಮಗಳ ಪ್ರಕಾರ ಆಹ್ವಾನ ಪತ್ರಿಕೆಯನ್ನು ಪ್ರಕಟಸಿದ್ದರು ಆದರೆ ಇದೇ ರಸ್ತೆಯಲ್ಲಿ ಬೇರೆ ಒಂದು ಸರಕಾರಿ ಕಾರ್ಯಕ್ರಮಕ್ಕೆ ಹೋದರು ಸಹ ಇತ್ತ ಮುಖ ಮಾಡದ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಸಂಸದರು ಹೋಗಿದ್ದನ್ನು ಜಿಲ್ಲೆಯ ಅಭಿವೃದ್ಧಿಗೆ ಸರಿಯಾದ ಬೆಳವಣಿಗೆ ಅಲ್ಲ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಅಧಿಕಾರಿ ಡಾ.ವಿ.ಮೇಘನಾ, ಗಾಯತ್ರಿ, ಸ್ಥಳೀಯ ಮುಖಂಡರಾದ ಮಂಜುನಾಥ್, ನಾರಾಯಣಸ್ವಾಮಿ, ಶ್ರೀನಿವಾಸ್, ವೆಂಕಟೇಶ್, ಮುನಿರಾಜು, ಎಂ ಎಸ್ ಶ್ರೀನಿವಾಸ್ ಮುನಿಸ್ವಾಮಿ, ಗುತ್ತಿಗೆದಾರ ಎಂ.ಎಸ್ ನವೀನ್, ಇದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.